Advertisement

Tragedy: ಬಿಹಾರದ 2 ಜಿಲ್ಲೆಗಳಲ್ಲಿ ಕಳ್ಳಭಟ್ಟಿ ದುರಂತ: ಒಟ್ಟು 35 ಮಂದಿ ಸಾವು

02:49 AM Oct 19, 2024 | Team Udayavani |

ಪಟ್ನಾ: ಬಿಹಾರದ ಸಿವಾನ್‌ ಮತ್ತು ಸರನ್‌ ಜಿಲ್ಲೆಯಲ್ಲಿ ಸಂಭವಿಸಿದ ಕಳ್ಳಭಟ್ಟಿ ದುರಂತದಲ್ಲಿ ಒಟ್ಟು 35 ಮಂದಿ ಅಸುನೀಗಿದ್ದಾರೆ. ಶುಕ್ರವಾರ ಒಂದೇ ದಿನ 10 ಮಂದಿ ಜೀವ ಕಳೆದುಕೊಂಡಿದ್ದಾರೆ ಎಂದು ಪೊಲೀಸ್‌ ಮಹಾ ನಿರ್ದೇಶಕ ನೀಲೇಶ್‌ ಕುಮಾರ್‌ ತಿಳಿಸಿದ್ದಾರೆ.

Advertisement

ಕಳ್ಳಭಟ್ಟಿ ಸೇವಿಸಿದ್ದರಿಂದ ಕೆಲವರು ದೃಷ್ಟಿಯನ್ನು ಕಳೆದುಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಜತೆಗೆ ಸಿವಾನ್‌, ಸರನ್‌ ಜಿಲ್ಲೆಯ ಆಸ್ಪತ್ರೆಗಳಲ್ಲಿ ದಾಖಲಾದವರ ಪೈಕಿ ಕೆಲವರ ಸ್ಥಿತಿ ಇನ್ನೂ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದುರಂತದ ಬಗ್ಗೆ ತನಿಖೆ ನಡೆಸಲು 2 ವಿಶೇಷ ತನಿಖಾ ತಂಡಗಳನ್ನು ರಚಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 15 ಜನರನ್ನು ಪೊಲೀಸರು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ ಎಂದು ನೀಲೇಶ್‌ ಕುಮಾರ್‌ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next