Advertisement

ಭಟ್ಕಳ: ಮನೆಯ ಹಿಂದುಗಡೆ ಆಟ ಆಡುತ್ತಾ ಆಕಸ್ಮಿಕವಾಗಿ ಮಳೆ ನೀರಿನ ಕಾಲುವೆಗೆ ಬಿದ್ದು ಬಾಲಕ ಸಾವು

06:35 PM May 21, 2022 | Team Udayavani |

ಭಟ್ಕಳ: ಅಂಗನವಾಡಿಗೆ ಹೋಗಿ ಬಂದಿದ್ದ ಬಾಲಕನೋರ್ವ ಮನೆಯ ಹಿಂದುಗಡೆ ಆಟವಾಡುತ್ತಾ ಇರುವಾಗ ಮಳೆ ನೀರಿನ ಕಾಲುವೆಯಲ್ಲಿ ಬಿದ್ದು ನೀರು ಕುಡಿದು ಮೃತಪಟ್ಟ ಘಟನೆ ತಾಲೂಕಿನ ಪಡುಶಿರಾಲಿಯಲ್ಲಿ ಸಂಭವಿಸಿದೆ.

Advertisement

ಮೃತ ಬಾಲಕನನ್ನು ವಿಜೇತ ಗಣಪತಿ ನಾಯ್ಕ (4) ಎಂದು ಗುರುತಿಸಲಾಗಿದೆ. ಈತನು ಅಂಗನವಾಡಿಗೆ ಹೋಗಿದ್ದು ಮೇ.20 (ಶುಕ್ರವಾರ) ರಂದು ಮಧ್ಯಾಹ್ನ ಮನೆಗೆ ಬಂದಿದ್ದು ತಾಯಿ ಮನೆಗೆಲಸದಲ್ಲಿರುವಾಗ ಮನೆಯ ಹಿಂದುಗಡೆ ಆಟವಾಡಿಕೊಂಡಿದ್ದ ಎನ್ನಲಾಗಿದೆ.

ಅಕಸ್ಮಿಕವಾಗಿ ಮಳೆ ನೀರು ಹರಿಯುವ ಕಾಲುವೆಗೆ ಬಿದ್ದ ಈತ ನೀರು ಕುಡಿದಿದ್ದು ತಕ್ಷಣ ಗಮನಿಸಿದ ತಾಯಿ ಆತನನ್ನು ಶಿರಾಲಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋದಾಗ ವೈದ್ಯರು ಮೃತ ಪಟ್ಟಿರುವ ಬಗ್ಗೆ ತಿಳಿಸಿದ್ದಾರೆನ್ನಲಾಗಿದೆ.

ಈ ಕುರಿತು ಮೃತ ಬಾಲಕನ ತಂದೆ ಗಣಪತಿ ಕೃಷ್ಣಾ ನಾಯ್ಕ ಮುರ್ಡೇಶ್ವರ ಠಾಣೆಯಲ್ಲಿ ದೂರು ನೀಡಿದ್ದು ದೂರನ್ನು ದಾಖಲಿಸಿಕೊಂಡ ಸಬ್ ಇನ್ಸ್ಪೆಕ್ಟರ್ ಪರಮಾನಂದ ಕೊಣ್ಣೂರ ತನಿಖೆ ನಡೆಸಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next