Advertisement

ಕಾರಿಗೆ ಟ್ಯಾಕ್ಟರ್ ಢಿಕ್ಕಿಯಾಗಿ ಮೂವರು ಸಾವು: ಅಂತ್ಯಕ್ರಿಯೆ ಮುಗಿಸಿ ಹೊರಟವರ ಬದುಕೇ ಅಂತ್ಯ.!

01:38 PM Feb 01, 2022 | Team Udayavani |

ಬಾಗಲಕೋಟೆ: ಸಂಬಂಧಿಕರೊಬ್ಬರು ಮೃತಪಟ್ಟ ಹಿನ್ನೆಲೆಯಲ್ಲಿ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿ ಮರಳಿ ತಮ್ಮೂರಿಗೆ ಹೊರಟಿದ್ದ ಮೂವರ ಬದುಕೇ ಅಂತ್ಯವಾಗಿದೆ. ಜಿಲ್ಲೆಯ ಬಾದಾಮಿ ತಾಲೂಕಿನ ಜಾಲಿಹಾಳ ಬಳಿ ಕಾರಿಗೆ ಟ್ಯಾಕ್ಟರ್ ಢಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟಿದ್ದಾರೆ.

Advertisement

ಮೃತಪಟ್ಟವರನ್ನು ಗದಗ ಜಿಲ್ಲೆಯ ಹಡಗಲಿ ಗ್ರಾಮದ ಬಸನಗೌಡ ಪಾಟೀಲ (60), ಮಂಜುನಾಥ ಮಾರನಬಸರಿ (38), ಸಂಗಮ್ಮ ಪಾಟೀಲ (55) ಎಂದು ಗುರುತಿಸಲಾಗಿದೆ.

ಟ್ಯಾಕ್ಟರ್ ಮತ್ತು ಕಾರು ಢಿಕ್ಕಿಯಾದ ರಭಸಕ್ಕೆ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದರೆ, ಮತ್ತೋರ್ವರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಅಸುನೀಗಿದ್ದಾರೆ. ಘಟನೆಯಲ್ಲಿ ಇನ್ನೂ ಇಬ್ಬರು ಗಾಯಗೊಂಡಿದ್ದು, ಅವರನ್ನು ಧಾರವಾಡದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತಪಟ್ಟವರು ಬಾಗಲಕೋಟೆ ತಾಲೂಕಿನ ಭಗವತಿ ಗ್ರಾಮದಲ್ಲಿ ಸಂಬಂಧಿಕರೊಬ್ಬರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿ, ಮರಳಿ ಗದಗ ಜಿಲ್ಲೆಯ ಹಡಗಲಿ ಗ್ರಾಮಕ್ಕೆ ತೆರಳುತ್ತಿದ್ದರು. ಈ ವೇಳೆ ದುರ್ಘಟನೆ ಸಂಭವಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next