Advertisement

ಬಳ್ಳಾರಿ: ಮೊಬೈಲ್ ಕೊಡಿಸದ್ದಕ್ಕೆ ತಲೆ ಮೇಲೆ ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆ

06:23 AM Feb 20, 2022 | Team Udayavani |

ಬಳ್ಳಾರಿ: ಮೊಬೈಲ್ ಕೊಡಿಸಲ್ಲ ಎಂದಿದ್ದಕ್ಕೆ ಮನೆಬಿಟ್ಟು ಹೋಗಿದ್ದ ವಿದ್ಯಾರ್ಥಿಯೊಬ್ಬ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದ್ದು, ಶನಿವಾರ ಬೆಳಕಿಗೆ ಬಂದಿದೆ.

Advertisement

ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕು ತೂಲಹಳ್ಳಿ ಗ್ರಾಮದ ವಿದ್ಯಾರ್ಥಿ ನಾಗರಾಜ್ (17) ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿ ಯುವಕ.

ಪ್ರಥಮ ಪಿಯುಸಿ ವ್ಯಾಸಂಗ  ಮಾಡುತ್ತಿರುವ ನಾಗರಾಜ ಮೊಬೈಲ್ ಕೊಡಿಸುವಂತೆ ಪೋಷಕರನ್ನು ಕೇಳಿದ್ದಾನೆ. ಮೊಬೈಲ್ ಕೊಡಿಸದ ಹಿನ್ನೆಲೆಯಲ್ಲಿ ಪೋಷಕರ ಮೇಲೆ ಮುನಿಸಿಕೊಂಡಿರುವ ನಾಗರಾಜ್, ಫೆ.19 ರಂದು ಮನೆಬಿಟ್ಟು ಹೋಗಿ ತಲೆ ಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬಳಿಕ ಸಂಪೂರ್ಣ ಸುಟ್ಟು ಕರಕಲಾಗಿರುವ ನಾಗರಾಜನ ಮೃತದೇಹ ಕೊಟ್ಟೂರು ಕೆರೆಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಕೊಟ್ಟೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next