Advertisement

Bangalore: ಚಲಿಸುತ್ತಿದ್ದ ರೈಲಿನಿಂದ ಕಾರಿನ ಮೇಲೆ ಬಿದ್ದು ಯುವಕ ದುರ್ಮರಣ

10:21 AM Mar 06, 2024 | Team Udayavani |

ಬೆಂಗಳೂರು: ಅರಮನೆ ರಸ್ತೆಯ ವಿಂಡ್ಸರ್‌ ಮ್ಯಾನರ್‌ ಮೇಲು ಸೇತುವೆಯಲ್ಲಿ ಚಲಿಸುತ್ತಿದ್ದ ರೈಲಿನಿಂದ ಆಯತಪ್ಪಿ ರೈಲು ಹಳಿ ಮೇಲೆ ಬಿದ್ದು ಬಳಿಕ ಮೇಲು ಸೇತುವೆ ಕೆಳ ರಸ್ತೆಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದು ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟಿರುವಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ.

Advertisement

ತಮಿಳುನಾಡು ಮೂಲದ ಗೌರಿಶಂಕರ್‌ (22) ಮೃತ ಯುವಕ.

ಮಂಗಳವಾರ ಮಧ್ಯಾಹ್ನ 3.20ರ ಸುಮಾರಿಗೆ ಈ ಘಟನೆ ನಡೆದಿದೆ. ಜೇಬಿನಲ್ಲಿ ಸಿಕ್ಕ ರೈಲ್ವೆ ಟಿಕೆಟ್‌, ಮೊಬೈಲ್‌ ಹಾಗೂ ಗುರುತಿನ ಚೀಟಿ ಆಧಾರದ ಮೇಲೆ ಮೃತನ ಗುರುತು ಪತ್ತೆ ಯಾಗಿದೆ.

ಆಂಬೂರು ಮೂಲದ ಗೌರಿ ಶಂಕರ್‌ ನಗರದ ಮಾಗಡಿ ರಸ್ತೆಯ ಕೆ.ಪಿ. ಅಗ್ರಹಾರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ. ಅಗರಬತ್ತಿ ತಯಾರಿಕಾ ಕಾರ್ಖಾನೆಲ್ಲಿ ಕೆಲಸ ಮಾಡುತ್ತಿದ್ದ. ಮನೆಯ ಕೆಲಸದ ನಿಮಿತ್ತ ಮಂಗಳವಾರ ಚೆನ್ನೈ ರೈಲಿನಲ್ಲಿ ಊರಿನತ್ತ ಪ್ರಯಾಣ ಬೆಳೆಸಿದ್ದ. ಆದರೆ, ರೈಲು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಹೊರಟ ಕೇವಲ 10 ನಿಮಿಷಕ್ಕೆ ರೈಲಿನಿಂದ ಆಯತಪ್ಪಿ ಬಿದ್ದಿದ್ದಾನೆ.

ಪ್ರಯಾಣದ ವೇಳೆ ಬೋಗಿಯ ಬಾಗಿಲು ಬಳಿ ಯುವಕ ನಿಂತಿದ್ದ. ರೈಲು ವಿಂಡ್ಸರ್‌ ಮ್ಯಾನರ್‌ ಮೇಲು ಸೇತುವೆಯಲ್ಲಿ ತೆರಳುವಾಗ ಆಯ ತಪ್ಪಿ ರೈಲ್ವೆ ಹಳಿಗೆ ಬಿದ್ದಿದ್ದು ಬಳಿಕ ನಿಯಂತ್ರಣ ಸಿಗದೆ ಉರುಳಿ ಮೇಲು ಸೇತುವೆಯ ಕೆಳ ರಸ್ತೆಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಪರಿಣಾಮ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ಪೊಲೀಸರು ಹೇಳಿದರು.

Advertisement

ಈತ ಬಿದ್ದ ರಭಸಕ್ಕೆ ಕಾರಿನ ಗಾಜುಗಳು ಪುಡಿಯಾಗಿದ್ದು, ಕಾರಿಗೆ ಸ್ವಲ್ಪ ನಜ್ಜುಗುಜ್ಜಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next