Advertisement

Bangalore: ಬೈಕ್‌ನ ಕನ್ನಡಿಗೆ ತಾಗಿದ ಸಾರಿಗೆ ಬಸ್‌: ಕೆಳಗೆ ಬಿದ್ದ ಸವಾರ, ಚಕ್ರ ಹರಿದು ಸಾವು

11:08 AM Feb 13, 2024 | Team Udayavani |

ಬೆಂಗಳೂರು: ದ್ವಿಚಕ್ರ ವಾಹನಕ್ಕೆ ಕೆಎಸ್‌ ಆರ್‌ಟಿಸಿ ಬಸ್‌ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿ ರುವ ಘಟನೆ ಯಶ ವಂತಪುರ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನಾಗಸಂದ್ರ ನಿವಾಸಿ ರಾಜೇಂದ್ರ (54) ಮೃತ ಸವಾರ.

Advertisement

ಯಶವಂತಪುರ ಮೆಟ್ರೋ ರೈಲ್ದಾಣದ ಬಳಿ ಸೋಮವಾರ ಬೆಳಗ್ಗೆ 10.30ರ ಸುಮಾರಿಗೆ ಈ ಘಟನೆ ನಡೆದಿದೆ.

ನೆಲಮಂಗಲದ ಖಾಸಗಿ ಕಂಪನಿಯಲ್ಲಿ ಅಕೌಂಟೆಂಟ್‌ ಆಗಿ ಕೆಲಸ ಮಾಡುತ್ತಿದ್ದ ರಾಜೇಂದ್ರ, ಕಂಪನಿ ಕೆಲಸದ ನಿಮಿತ್ತ ಮೇಖ್ರಿ ವೃತ್ತದ ಜಿಎಸ್‌ಟಿ ಕಚೇರಿಗೆ ಬೆಳಗ್ಗೆ ದ್ವಿಚಕ್ರ ವಾಹನದಲ್ಲಿ ತೆರಳು ತ್ತಿದ್ದರು. ಯಶವಂತಪುರ ಮೆಟ್ರೋ ರೈಲು ನಿಲ್ದಾಣದ ಕೆಳ ರಸ್ತೆಯಲ್ಲಿ ತೆರಳುವಾಗ ಎಡಭಾಗದಲ್ಲಿ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌, ದ್ವಿಚಕ್ರ ವಾಹನದ ಕನ್ನಡಿಗೆ ತಾಕಿದೆ. ಈ ವೇಳೆ ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನ ಸಹಿತ ರಾಜೇಂದ್ರ ರಸ್ತೆಗೆ ಬಿದ್ದಿದ್ದಾರೆ. ಆಗ ಬಸ್‌ನ ಎಡಭಾಗದ ಚಕ್ರ ಬಳಿ ಸಿಲುಕಿದ ರಾಜೇಂದ್ರ ನನ್ನು ಸುಮಾರು 25 ಅಡಿಗಳಷ್ಟು ಬಸ್‌ ಎಳೆದುಕೊಂಡು ಮುಂದೆ ಸಾಗಿದ್ದು, ಪರಿಣಾಮ ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಸಂಚಾರ ಪೊಲೀಸರು ಮಾಹಿತಿ ನೀಡಿದರು.

ವಿಷಯ ತಿಳಿದು ಸ್ಥಳಕ್ಕೆ ದೌಡಾಯಿ ಸಿದ ಸಂಚಾರ ಪೊಲೀಸರು ಪರಿಶೀಲನೆ ನಡೆಸಿ, ಮೃತದೇಹವನ್ನು ಎಂ.ಎಸ್‌. ರಾಮಯ್ಯ ಆಸ್ಪತ್ರೆಗೆ ಸಾಗಿಸಿ, ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬ ಸದಸ್ಯರಿಗೆ ಹಸ್ತಾಂತರಿಸಿದ್ದಾರೆ.

ಘಟನೆ ಸಂಬಂಧ ಕೆಎಸ್‌ಆರ್‌ಟಿಸಿ ಬಸ್‌ ಜಪ್ತಿ ಮಾಡಿದ್ದು, ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆಗೆ ನಡೆಸಲಾಗುತ್ತಿದೆ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಯಶವಂತಪುರ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

 

Advertisement

Udayavani is now on Telegram. Click here to join our channel and stay updated with the latest news.

Next