Advertisement

ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ಸಹೋದರರು ನೀರುಪಾಲು

05:06 PM Jun 28, 2021 | Team Udayavani |

ಬೆಳಗಾವಿ: ಕೃಷ್ಣಾ ನದಿಯಲ್ಲಿ ಬಟ್ಟೆ ಒಗೆಯಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ಸಹೋದರರು  ನೀರು ಪಾಲಾಗಿರುವ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹಲ್ಯಾಳ ಗ್ರಾಮದಲ್ಲಿ ಸೋಮವಾರ ನಡೆದಿದೆ.

Advertisement

ನೀರು ಪಾಲಾಗಿರುವ ದುರ್ದೈವಿಗಳನ್ನು ಗೋಪಾಲ ಬನಸುಡೆ (36), ಸದಾಶಿವ (24),ಧರೆಪ್ಪ (22) ಹಾಗೂ ಶಂಕರ ಬನಸುಡೆ ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: ಸಾಲಬಾಧೆ ಶಂಕೆ:ಒಂದೇ ಕುಟುಂಬದ 6 ಜನ ಆತ್ಮಹತ್ಯೆ; 4 ಮಕ್ಕಳೊಂದಿಗೆ ಬಾವಿಗೆ ಹಾರಿದ ದಂಪತಿಗಳು

ನಾಲ್ವರು ಸಹೋದರರು ಗ್ರಾಮದಲ್ಲಿ ಜಾತ್ರೆ ಇರುವ ಕಾರಣ ಕುಟುಂಬದ ಸದಸ್ಯರ ಜೊತೆಗೆ ಬಟ್ಟೆ ತೊಳೆಯಲು ಕೃಷ್ಣಾ ನದಿಗೆ ಹೋಗಿದ್ದರು. ಈ ವೇಳೆ ಸದಾಶಿವ ಕಾಲು ಜಾರಿ ನೀರಿನಲ್ಲಿ ಬಿದ್ದಿದ್ದಾನೆ. ಆತನ ರಕ್ಷಣೆಗೆ ಧಾವಿಸಿದ ಮೂವರೂ ಸಹೋದರರು ಸದಾಶಿವ ಜೊತೆ ನೀರು ಪಾಲಾಗಿದ್ದಾರೆ. ಇಡೀ ಗ್ರಾಮದಲ್ಲಿ ಈಗ ಸ್ಮಶಾನ ಮೌನ ಆವರಿಸಿದೆ.

ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು ಅಗ್ನಿಶಾಮಕ ದಳ ಸಿಬ್ಬಂದಿಗಳು ಸ್ಥಳೀಯರ ನೆರವಿನಿಂದ ಶೋಧ ಕಾರ್ಯ ನಡೆಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next