Advertisement

ಬೆಳ್ತಂಗಡಿ: ಹಳ್ಳ ದಾಟುವ ವೇಳೆ ಕಾಲು ಜಾರಿ ನೀರಲ್ಲಿ ಮುಳುಗಿ ವ್ಯಕ್ತಿ ಸಾವು

12:20 PM Nov 09, 2021 | Team Udayavani |

ಬೆಳ್ತಂಗಡಿ: ಹಳ್ಳ ದಾಟುವ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ವ್ಯಕ್ತಿ ಯೋರ್ವರು ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ಮಲವಂತಿಗೆಯಲ್ಲಿ ಜರುಗಿದೆ.

Advertisement

ಇಲ್ಲಿನ  ನಿವಾಸಿ ಹಿರಿಮಾರು ನಿವಾಸಿ ಕಿನ್ನಿ ಗೌಡರ ಪುತ್ರ ಗಣೇಶ್ (40) ಎಂಬವರು ತಮ್ಮ ತೋಟದಿಂದ ಅಡಕೆ ಹೆಕ್ಕಿ ಮರಳುವ ವೇಳೆ ಮಲ್ಲಕಜಕ್ಕೆ ಬಳಿ ಹಳ್ಳ ದಾಟುವಾಗ ಕಾಲುಜಾರಿ ರಭಸವಾಗಿ ಹರಿಯುವ ನೀರಿಗೆ ಬಿದ್ದು ಕೊಚ್ಚಿ ಹೋಗಿದ್ದರು.

ಬಳಿಕ ಸ್ಥಳೀಯರು ಶೋಧ ನಡೆಸಿದ್ದು,ತುಸು ದೂರದ ಕಲ್ಲುಬಂಡೆಯ ಸಂದಿನಲ್ಲಿ ಶವ ಪತ್ತೆಯಾಗಿದೆ. ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲಾಗಿದೆ.

ಮೃತರಿಗೆ ತಂದೆ ತಾಯಿ ಪತ್ನಿ ಹಾಗೂ ಇಬ್ಬರು ಪುತ್ರಿಯರಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next