Advertisement

ನೀರಿನ ಸಂಪ್‌ ಕ್ಲೀನ್‌ ಮಾಡುವಾಗ ಕರೆಂಟ್ ಹೊಡೆದು ತಂದೆ-ಮಗ ಸ್ಥಳದಲ್ಲೇ ಸಾವು

06:45 PM Jan 19, 2022 | Team Udayavani |

ಬೆಂಗಳೂರು: ನೀರಿನ ಸಂಪ್ ಸ್ವಚ್ಚಗೊಳಿಸುವಾಗ ವಿದ್ಯುತ್ ಪ್ರವಹಿಸಿ ತಂದೆ-ಮಗ ಸಾವನ್ನಪ್ಪಿರುವ ದಾರುಣ ಘಟನೆ ರಾಜಧಾನಿಯಲ್ಲಿ ನಡೆದಿದೆ.

Advertisement

ಆರ್ ಟಿ ನಗರದ ಸುಲ್ತಾನ್ ಪಾಳ್ಯ ಬಳಿಯಿರುವ ರಾಮಕೃಷ್ಣ ಅಪಾರ್ಟ್ ಮೆಂಟ್ ನಲ್ಲಿ ಇಂದು ಬೆಳಗ್ಗೆ  ಸಂಪ್ ಕ್ಲೀನ್ ಮಾಡುವುದಕ್ಕೆ ಹೋಗಿದ್ದ ರಾಜು ಎಂಬುವರಿಗೂ ಆಚಾನಕ್ಕಾಗಿ ವಿದ್ಯುತ್ ಹರಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.‌ ಅಪ್ಪನ ಜೊತೆ ಬಂದಿದ್ದ 10 ವರ್ಷದ ಮಗ ಸಾಯಿ ತಂದೆ ಚೀರಾಟ ಕಂಡು ರಕ್ಷಿಸಲು ಹೋಗಿದ್ದಾನೆ. ಈ ವೇಳೆ ಬಾಲಕನಿಗೂ ಕರೆಂಟ್ ಹೊಡೆದು ಸ್ಥಳದಲ್ಲೇ‌ ಮೃತಪಟ್ಟಿದ್ದಾನೆ. ಘಟನೆಗೆ ಅಪಾರ್ಟ್ ಮೆಂಟ್ ಮಾಲೀಕರ ನಿರ್ಲಕ್ಷ್ಯ ಕಂಡು ಬಂದಿದೆ.

ಮಾಹಿತಿ ಅರಿತು ಸ್ಥಳಕ್ಕೆ ದೌಡಾಯಿಸಿದ ಆರ್.ಟಿ.ನಗರ‌ ಪೊಲೀಸರು ಮರಣೋತ್ತರ ಪರೀಕ್ಷೆಗಾಗಿ ಅಂಬೇಡ್ಕರ್ ಆಸ್ಪತ್ರೆ ರವಾನಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ‌.

Advertisement

Udayavani is now on Telegram. Click here to join our channel and stay updated with the latest news.

Next