Advertisement

ರೈಲು ಹಳಿಗೆ ತಲೆಕೊಟ್ಟು ಪ್ರೇಮಿಗಳ ಆತ್ಮಹತ್ಯೆ

01:30 PM Mar 26, 2022 | Team Udayavani |

ಬೆಂಗಳೂರು: ರೈಲು ಹಳಿಗೆ ತಲೆ ಕೊಟ್ಟು ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ಬೈಯಪ್ಪನಹಳ್ಳಿ ರೈಲ್ವೆ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ಸಂಭವಿಸಿದೆ.

Advertisement

ಹೊಸಕೋಟೆ ಸಮೀಪದ ಕನ್ನಮಂಗಲದ ನಿವಾಸಿ ಚೇತನಾ (20) ಹಾಗೂ ಸಿರಸ್‌ ಚಂದ್ರ (21) ಆತ್ಮಹತ್ಯೆಗೆ ಶರಣಾದವರು. ಕೆ.ಆರ್‌.ಪುರದ ಸೌತ್‌ ಈಸ್ಟ್‌ ಏಷ್ಯನ್‌ (ಎಸ್‌ಇಎ) ಕಾಲೇಜಿನಲ್ಲಿ ಬಿಪಿಎ ವ್ಯಾಸಂಗ ಮಾಡುತ್ತಿದ್ದ ಚೇತನಾ ಮತ್ತು ಸಿರಸ್‌ಚಂದ್ರ ಶುಕ್ರವಾರ ಸಂಜೆ ಸುಮಾರು 6 ಗಂಟೆಯ ಸಮಯದಲ್ಲಿ ಹೊರಮಾವು ರೈಲ್ವೆ ಬ್ರಿಡ್ಜ್ ಬಳಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಸ್ಥಳಕ್ಕೆ ಬೈಯಪ್ಪನಹಳ್ಳಿ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಸ್ಥಳದಲ್ಲಿ ಯಾವುದೇ ಡೆತ್‌ನೋಟ್‌ ಪತ್ತೆಯಾಗಿಲ್ಲ.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ರೈಲ್ವೆ ಪೊಲೀಸರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next