Advertisement

Hunsur: ಹಬ್ಬಕ್ಕೆ ತೆರಳುತ್ತಿದ್ದ ವ್ಯಕ್ತಿ ಬಸ್ ಚಕ್ರದಡಿ ಸಿಲುಕಿ ಸಾವು

09:48 AM Oct 25, 2023 | Team Udayavani |

ಹುಣಸೂರು: ಬಸ್ ಹತ್ತುವ ಭರದಲ್ಲಿ ಆಯತಪ್ಪಿ ಬಿದ್ದು ಬಸ್‌ ಚಕ್ರಕ್ಕೆ ಸಿಲುಕಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ತಾಲೂಕಿನ ಕಟ್ಟೆಮಳಲವಾಡಿ ಬಸ್ ನಿಲ್ದಾಣದಲ್ಲಿ  ನಡೆದಿದೆ.

Advertisement

ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿಯ ಹರವೆ ಗ್ರಾಮದ ರವಿ(35) ಮೃತ ಪಟ್ಟ ದುರ್ದೈವಿ. ಇವರಿಗೆ ಪತ್ನಿ,ಒಂದು ಹೆಣ್ಣು, ಎರಡು ಗಂಡು ಮಕ್ಕಳಿದ್ದಾರೆ.

ಹುಣಸೂರಿನಿಂದ ಕೆಆರ್ ನಗರ ಕಡೆಗೆ ತೆರಳುತ್ತಿದ್ದ ಕೆ.ಆರ್.ನಗರ ಡಿಪೋಗೆ ಸೇರಿದ ಬಸ್  ಕಟ್ಟೆಮಳಲವಾಡಿ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರನ್ನು ಹತ್ತಿಸಿಕೊಂಡು ಹೊರಡಲು ಅನುವಾಗುತ್ತಿದ್ದಂತೆ ರವಿ ಬಸ್ ಹತ್ತಲು ಪ್ರಯತ್ನಿಸಿ ಆಯತಪ್ಪಿ ಜಾರಿ ಬಿದ್ದು ಮುಂದಿನ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅಕ್ಕನ ಮನೆಯ ಮಹಾನವಮಿ ಹಬ್ಬ ತೆರಳುತ್ತಿದ್ದರು ರವಿ ತೆರಳುತ್ತಿದ್ದರು ಎನ್ನಲಾಗಿದೆ.

ಈ ಸಂಬಂಧ ಹುಣಸೂರು ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮರಣೋತ್ತರ ಪರೀಕ್ಷೆ ನಂತರ ಶವವನ್ನು ವಾರಸುದಾರರಿಗೆ ಹಸ್ತಾಂತರಿಸಲಾಗಿದೆ.

Advertisement

ತಾತ್ಕಾಲಿಕ ಪರಿಹಾರ:

ವಿಷಯ ತಿಳಿದ ಹುಣಸೂರು ಡಿಪೊ ಮ್ಯಾನೇಜರ್ ಸುಬ್ರಮಣ್ಯ ಘಟನಾ ಸ್ಥಳ ಹಾಗೂ ಆಸ್ಪತ್ರೆಗೆ ಭೇಟಿ ನೀಡಿ ಮೃತ ರವಿ ಕುಟುಂಬಕ್ಕೆ 25 ಸಾವಿರ ರೂ. ತಾತ್ಕಾಲಿಕ ಪರಿಹಾರ ವಿತರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next