Advertisement

ಕಡೂರಿನಲ್ಲಿ  ಲಾರಿ- ಬೈಕ್‌ ಢಿಕ್ಕಿ: ಅಪ್ಪ, ಮಗಳು ಸ್ಥಳದಲ್ಲೇ ಸಾವು

10:47 PM Sep 09, 2021 | Team Udayavani |

ಕಡೂರು: ದ್ವಿಚಕ್ರ ವಾಹನವೊಂದಕ್ಕೆ ಗ್ಯಾಸ್‌ ಸಿಲಿಂಡರ್‌ ಸಾಗಿಸುತ್ತಿದ್ದ ಲಾರಿ ಢಿಕ್ಕಿ ಹೊಡೆದ ಪರಿಣಾಮ ತಂದೆ ಮತ್ತು ಮಗಳು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಕಡೂರು ತಾಲೂಕು ಸಖರಾಯಪಟ್ಟಣ ಪೊಲೀಸ್‌ ಠಾಣೆ ವ್ಯಾಪ್ತಿಯ ಉದ್ದೇಬೋರನಹಳ್ಳಿ ಗ್ರಾಮದಲ್ಲಿ  ಸಂಭವಿಸಿದೆ.

Advertisement

ಚಿಕ್ಕಮಗಳೂರು ತಾಲೂಕು ಮುಗುಳುವಳ್ಳಿ ಗ್ರಾಮದ ಜಯಣ್ಣ (60) ಮತ್ತು ಅವರ ಮಗಳು ರಕ್ಷಿತಾ (20) ಮೃತಪಟ್ಟವರು. ಗೌರಿ ಹಬ್ಬದ ಹಿನ್ನೆಲೆಯಲ್ಲಿ ಜಯಣ್ಣ  ಅವರು ಕಿರಿಯ ಪುತ್ರಿಯೊಂದಿಗೆ ಬುಧವಾರ ಕಡೂರು ತಾಲೂಕು ಸಖರಾಯಪಟ್ಟಣ ಸಮೀಪದ ಪಿಳ್ಳೇನಹಳ್ಳಿ ಗ್ರಾಮದ ದೊಡ್ಡ ಮಗಳ ಮನೆಗೆ ಬಾಗಿನ ನೀಡಲು ಬೈಕಿನಲ್ಲಿ ತೆರಳುತ್ತಿದ್ದರು. ಅಲ್ಲಿಂದ ಮರಳುತ್ತಿದ್ದಾಗ ಅಪಘಾತ ಸಂಭವಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next