Advertisement

ಕೆಮ್ಮಾರ: ಇಲಿಪಾಷಾಣ ತಿಂದು ಎರಡೂವರೆ ವರ್ಷದ ಹೆಣ್ಣು ಮಗು ಸಾವು

03:59 PM Jun 20, 2021 | Team Udayavani |

ಕೆಮ್ಮಾರ: ಇಲಿ ಪಾಷಾಣ ತಿಂದು ಎರಡೂವರೆ ವರ್ಷದ ಹೆಣ್ಣು ಮಗುವೊಂದು ಮೃತಪಟ್ಟ ದಾರುಣ ಘಟನೆ ಬಜತ್ತೂರು ಗ್ರಾಮದ ಕೆಮ್ಮಾರದಲ್ಲಿ ನಡೆದಿದೆ.

Advertisement

ಕೆಮ್ಮಾರ ನಿವಾಸಿ, ನಿವೃತ್ತ ಸೈನಿಕ ಸೈಜು ಎಂಬವರ ಪುತ್ರಿ, ಎರಡೂವರೇ ವರ್ಷದ ಶ್ರೇಯಾ ಮೃತಪಟ್ಟ ಮಗು.

ಮಗುವಿನ ತಂದೆ, ತಾಯಿ ನಾಯಿ ಗೂಡಿನ ಮೇಲಿದ್ದ ಸಾಮಾಗ್ರಿಗಳನ್ನು ಕ್ಲೀನ್ ಮಾಡುತ್ತಿದ್ದ ವೇಳೆಯಲ್ಲಿ ಅದರಲ್ಲಿ ಹಿಂದೆ ತಂದಿದ್ದ ಇಲಿ ಪಾಷಾಣದ ಟ್ಯೂಬ್ ಸಹ ಇತ್ತು. ಮನೆಯವರು ಕೆಲಸ ಮಾಡುತ್ತಿದ್ದಂತೆ ಮಗು ಆಟವಾಡುತ್ತ ಬಂದು ಇಲಿ ಪಾಷಾಣ ತಿಂದಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ಮಂಗಳೂರು : ನಿಯಮ ಮೀರಿ 4 ಜೋಡಿಗಳ ಮದುವೆ; ಅಧಿಕಾರಿಗಳ ದಾಳಿ

ಮಧ್ಯಾಹ್ನದ ವೇಳೆ ಮಗುವಿಗೆ ವಾಂತಿ ಆರಂಭಗೊಂಡಿದ್ದು ತಕ್ಷಣ ಉಪ್ಪಿನಂಗಡಿಯ ಆಸ್ಪತ್ರೆಗೆ ಕರೆತಂದು ಬಳಿಕ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಗು ತೀವ್ರ ಅಸ್ವಸ್ಥಗೊಂಡಿದ್ದ ಹಿನ್ನೆಲೆಯಲ್ಲಿ ರವಿವಾರ ( ಜೂನ್ 20) ರಂದು ಬೆಳಿಗ್ಗೆ ಮಂಗಳೂರಿನ ಎ.ಜೆ.ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ತಪಾಸಣೆ ವೇಳೆ ಮಗು ಮೃತಪಟ್ಟಿರುವುದಾಗಿ ವರದಿಯಾಗಿದೆ.

Advertisement

ಮೃತ ಶ್ರೇಯಾ ತಂದೆ ಸೈಜು, ತಾಯಿ ದೀಪ್ತಿ,ಸಹೋದರ ಸಿಯೋನ್‌ರನ್ನು ಅಗಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next