Advertisement

ನಿಂತಿದ್ದ ಲಾರಿಗೆ ಸ್ಕೂಟರ್ ಡಿಕ್ಕಿ: ಇಬ್ಬರು ಮಕ್ಕಳು ಸೇರಿದಂತೆ ಮೂವರ ದುರ್ಮರಣ

11:04 PM Sep 04, 2021 | Team Udayavani |

ಮಂಡ್ಯ: ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ ಮೂವರ ಸಾವನ್ನಪ್ಪಿದ್ದು, ಒಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಗುಡ್ಡೇನಹಳ್ಳಿ ಕ್ರಾಸ್ ಬಳಿ ಘಟನೆ‌ ಶನಿವಾರ ರಾತ್ರಿ ನಡೆದಿದೆ.

Advertisement

ಆನಂದಕುಮಾರ್ (62), ಆರಾಧ್ಯ (10), ಗೌರವ್ (5) ಮೃತ ದುರ್ದೈವಿಗಳಾಗಿದ್ದು, ಸೊಸೆ ಮೋನಿಕಾ ಸ್ಥಿತಿ ಗಂಭೀರವಾಗಿದೆ.

ತವರು ಮನೆಯಿಂದ ಸ್ಕೂಟರ್‌ನಲ್ಲಿ ಸೊಸೆ ಮತ್ತು ಮೊಮ್ಮಕ್ಕಳನ್ನು ಮನೆಗೆ ಕರೆದುಕೊಂಡು ಬರುತ್ತಿದ್ದ ಮಾವ ಆನಂದಕುಮಾರ್, ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದಾರೆ.

ಗುಡ್ಡೇನಹಳ್ಳಿಯಿಂದ ಹೊಣಕೆರೆಗೆ ಬರುವ ವೇಳೆ ಅಪಘಾತವಾಗಿದೆ.

ಈ ವೇಳೆ ಆಂನದಕುಮಾರ್ , ಆರಾಧ್ಯ ಸ್ಥಳದಲ್ಲೇ ಸಾವು. ಗೌರವ್‌ನನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾನೆ.

Advertisement

ಗಂಭೀರಗೊಂಡಿರುವ ಸೊಸೆ ಮೋನಿಕಾಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ನಾಗಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next