Advertisement

ರಾಮನಗರ: ಪತಿಯ ಕಿರುಕುಳ ತಾಳಲಾರದೆ ಗರ್ಭಿಣಿ ಆತ್ಮಹತ್ಯೆಗೆ ಶರಣು

07:33 PM Jan 26, 2022 | Team Udayavani |

ರಾಮನಗರ: ಪತಿಯ ಕಿರುಕುಳ ತಾಳಲಾರದೆ  ಐದು ತಿಂಗಳ ಗರ್ಭಿಣಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಐಜೂರು ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Advertisement

ನಗರದ ಮಂಜುನಾಥನಗರದ ತನ್ನ ತವರು ಮನೆಯಲ್ಲಿ ಜಾಹ್ನವಿ (23) ಆತ್ಮಹತ್ಯೆಗೆ ಶರಣಾದ ಗರ್ಭಿಣಿ.

9 ತಿಂಗಳ ಹಿಂದೆ ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಬಲ್ಲೇನಹಳ್ಳಿ ಗ್ರಾಮದ ವ್ಯಕ್ತಿ ಕರ್ಣ ಎಂಬುವನ ಜೊತೆ ಜಾಹ್ನವಿಯನ್ನು ಮದುವೆ ಮಾಡಿಕೊಡಲಾಗಿತ್ತು. ಆದರೆ ಪತಿ ಕರ್ಣ ತಮ್ಮ ಮಗಳನ್ನು ಹೊಡೆದು, ಬಡಿದು ಚಿತ್ರ ಹಿಂಸೆ ಕೊಡುತ್ತಿದ್ದ. ತಿಂಗಳ ಹಿಂದೆ ಜಾಹ್ನವಿ ತವರು ಮನೆಗೆ ವಾಪಸ್ಸು ಬಂದಿದ್ದಳು. ತದ ನಂತರವೂ  ಪೋನ್ ಮೂಲಕ ಚಿತ್ರಹಿಂಸೆ ಕೊಡುತ್ತಿದ್ದ ಎಂದು ಮೃತಳ ಪೋಷಕರು ದೂರಿದ್ದಾರೆ.

ನಿರಂತರ ಚಿತ್ರ ಹಿಂಸೆ ತಾಳಲಾರದೆ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ನೇಣಿಗೆ ಜಾಹ್ನವಿ ನೇಣಿಗೆ ಶರಣಾಗಿದ್ದಾರೆ. ಸ್ಥಳಕ್ಕೆ ಐಜೂರು ಪೊಲೀಸರು ಭೇಟಿ ಕೊಟ್ಟು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next