Advertisement

ಕೊಟ್ಟ ಸಾಲ ಕೇಳಿದ್ದಕ್ಕೆ ಅನೈತಿಕ ಸಂಬಂಧದ ಅಪ್ರಚಾರ: ಇಬ್ಬರು ಮಕ್ಕಳೊಂದಿಗೆ ಮಹಿಳೆ ಆತ್ಮಹತ್ಯೆ

06:29 PM Jan 15, 2022 | Team Udayavani |

ಶಿವಮೊಗ್ಗ: ಕೊಟ್ಟ ಸಾಲ ವಾಪಾಸ್ ಕೇಳಿದಕ್ಕೆ ವೈಯಕ್ತಿಕ ಅಪಪ್ರಚಾರ ಮಾಡಿದ್ದಕ್ಕೆ ಮನನೊಂದು ಮಹಿಳೆಯೊಬ್ಬರು ತನ್ನ ಎರಡು ಮಕ್ಕಳೊಂದಿಗೆ ಭದ್ರಾ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

Advertisement

ಭದ್ರಾವತಿ ತಾಲೂಕಿನ ಯಡೇಹಳ್ಳಿಯ ನಿವಾಸಿ ವೀಣಾ ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡವರು. ವೀಣಾ ದಂಪತಿಯು ಭದ್ರಾವತಿ ತಾಲೂಕಿನ ಅರಹತೋಳಲು ಗ್ರಾಮದ ಸಂತೋಷ್ ಹಾಗೂ ಆಶಾ ಎಂಬುವರಿಗೆ 8 ಲಕ್ಷ ರೂ. ಸಾಲ ನೀಡಿದ್ದರು. ಈ ಸಾಲ ವಾಪಸ್ ನೀಡುವಂತೆ ಕೇಳಿದ್ದಕ್ಕೆ ಆಶಾ ಹಾಗೂ ಸಂತೋಷ್ ದಂಪತಿಯು ವೀಣಾ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ಅಪಪ್ರಚಾರ ನಡೆಸಿದ್ದಾರೆ ಎನ್ನಲಾಗಿದೆ.

ಎಷ್ಟೇ ಕೇಳಿಕೊಂಡರು ಅದನ್ನೇ ಮುಂದುವರೆಸಿದ್ದರಿಂದ ಮನನೊಂದು 7 ವರ್ಷದ ಹಾಗೂ 1 ವರ್ಷದ ಇಬ್ಬರು ಹೆಣ್ಣು ಮಕ್ಕಳೊಂದಿಗೆ ಹಂಚಿನ ಸಿದ್ದಾಪುರ ಬಳಿಯ ಭದ್ರಾ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ವೀಣಾ ಜ.13ರಂದು ತನ್ನ ತವರು ಮನೆ ಹೊಳಲ್ಕೆರೆಗೆ ಹೋಗಿ ಬರುವುದಾಗಿ ಹೊರಟ್ಟಿದ್ದು ಊರಿನ ಬಳಿ ಬಸ್ ಹತ್ತಿಕೊಂಡು ಅಲ್ಲಿಂದ ಎರಡು ಕಿ.ಮೀ ಮುಂದಿನ ಭದ್ರಾ ಕಾಲುವೆ ಬಳಿ ಇಳಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಇದನ್ನೂ ಓದಿ:ಹೆಬ್ರಿ: ಕಾಲು ಜಾರಿ ಬಾವಿಗೆ ಬಿದ್ದ ಪ್ರಕರಣ; ಅಣ್ಣನೇ ತಮ್ಮನ ಕೊಲೆಗೈದಿರುವ ಶಂಕೆ

Advertisement

ವೀಣಾ ಸಾಯುವ ಮುನ್ನ ಡೆತ್‌ನೋಟ್ ಬರೆದಿದ್ದು ನಾಲೆದ ದಡದ ಮೇಲೆಯೇ ಬ್ಯಾಗ್ ಪತ್ತೆಯಾಗಿದೆ. ವೀಣಾ ಮೃತದೇಹ ಹೊನ್ನಾಳಿ ತಾಲ್ಲೂಕಿನ ಯಕ್ಕನಹಳ್ಳಿ ಬಳಿ, ಮೊದಲ ಮಗಳ ಮೃತದೇಹ ಚನ್ನಗಿರಿ ತಾಲ್ಲೂಕಿನ ನಲ್ಲೂರು ಬಳಿ ಪತ್ತೆಯಾಗಿದೆ. ಇನ್ನೊಬ್ಬಳ ಮೃತದೇಹ ಪತ್ತೆಗೆ ಶೋಧ ಕಾರ್ಯ ನಡೆಯುತ್ತಿದೆ.

ಮೃತ ವೀಣಾ ಪತಿ ಸಂತೋಷ್ ನೀಡಿದ ದೂರಿನ ಮೇರೆಗೆ ಅರಹತೋಳಲು ಗ್ರಾಮದ ಸಂತೋಷ್(35) ನನ್ನು ಹೊಳೆಹೊನ್ನೂರು ಪೊಲೀಸರು ಬಂಧಿಸಿದ್ದಾರೆ. ಆದರೆ ಆಶಾ ಪರಾರಿಯಾಗಿದ್ದಾಳೆ. ಈ ಬಗ್ಗೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next