Advertisement

ಶ್ರೀರಂಗಪಟ್ಟಣ: ಬೈಕ್ ಗಳ ಮುಖಾಮುಖಿ ಢಿಕ್ಕಿ; ಓರ್ವ ಸ್ಥಳದಲ್ಲೇ ಸಾವು,ಮತ್ತಿಬ್ಬರು ಗಂಭೀರ

11:22 AM Dec 19, 2021 | Team Udayavani |

ಶ್ರೀರಂಗಪಟ್ಟಣ: ಎರಡು ಬೈಕ್ ಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿ ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ  ತಾಲೂಕಿನ ಹೊಸಹುಂಡಿ ಗೇಟ್ ಬಳಿ ನಡೆದಿದೆ.

Advertisement

ಚನ್ನಹಳ್ಳಿ ಗ್ರಾಮದ ಬೈಕ್ ಸವಾರ ದರ್ಶನ್(19) ಮೃತ ಯುವಕ.

ಹಿಂಬಂದಿ ಸವಾರ ಅಜಯ್(19) ಹಾಗೂ ಮತ್ತೊಂದು ಬೈಕಿನ ಸವಾರ ಕೃಷ್ಣಮೂರ್ತಿ(34)  ಗಂಭೀರವಾಗಿ ಗಾಯಗೊಂಡದ್ದು ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಅರಕೆರೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಶ್ರೀರಂಗಪಟ್ಟಣ ತಾಲೂಕಿನ  ಅರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Advertisement

Udayavani is now on Telegram. Click here to join our channel and stay updated with the latest news.

Next