Advertisement

ಬೋರ್ ವೆಲ್ ಲಾರಿ – ಕಾರು ಅಪಘಾತ: ಕಂಬಳ ನೋಡಿ ವಾಪಾಸ್‌ ಆಗುತ್ತಿದ್ದ ದ.ಕ ಮೂಲದ ಇಬ್ಬರ ಸಾವು

03:31 PM Nov 26, 2023 | Team Udayavani |

ಕುಣಿಗಲ್ : ಬೋರ್ ವೆಲ್ ಹಾಗೂ ಕಾರು ನಡುವೆ  ಭೀಕರ ಢಿಕ್ಕಿ ಸಂಭವಿಸಿ ಇಬ್ಬರು ಸ್ಥಳದಲ್ಲೇ ಮೃತಪಟ್ಟು ಮೂರು ಮಂದಿ ಗಾಯಗೊಂಡಿರುವ ಘಟನೆ ರಾಜ್ಯ ಹೆದ್ದಾರಿ 33 ತಾಲೂಕಿನ ಕೊತ್ತಗೆರೆ ಹೋಬಳಿ ಚಿಗಣಿ ಪಾಳ್ಯ ಗ್ರಾಮದ ಬಳಿ ಭಾನುವಾರ (ನ.26 ರಂದು) ಮುಂಜಾನೆ ಸಂಭವಿಸಿದೆ.

Advertisement

ಮಂಗಳೂರಿನ ಬಜಪೆ ಮೂಲದ ಕಿಶಾನ್ ಶೆಟ್ಟಿ( 20 ) ಬಂಟ್ವಾಳದ ಬೆಂಜನಪದವಿನ ಫಿಲೀಪ್ ನೇರಿ ಲೋಬೋ (32) ಮೃತ ದುರ್ಧೈವಿಗಳು. ನಿತೀಶ್ ಭಡಾರಿ, ಮೃತ ಫಿಲೀಪ್ ಪತ್ನಿ ಪ್ರೀತಿ ಲೋಬೋ, ಬೆಂಜನಪದವು ನಿವಾಸಿ  ಹರೀಶ್ ತೀವ್ರವಾಗಿ ಗಾಯಗೊಂಡು ಅದಿಚುಂಚನಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರಿನಲ್ಲಿ ಶನಿವಾರ ನಡೆಯುತ್ತಿದ್ದ ಕಂಬಳವನ್ನು ನೋಡಿಕೊಂಡು ತಮ್ಮ ಊರಿಗೆ ಮಂಗಳೂರಿಗೆ ವಾಪಸ್ ಆಗುತ್ತಿದ್ದ ವೇಳೆ ಕುಣಿಗಲ್ ಕಡೆಯಿಂದ ತುಮಕೂರು ಕಡೆಗೆ ಹೊಗುತ್ತಿದ್ದ ಲಾರಿ ಢಿಕ್ಕಿ ಹೊಡೆದ ಪರಿಣಾಮ ಈ ಅವಘಡ ಸಂಭವಿಸಿದೆ.

ಕುಣಿಗಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Advertisement

ದಾರಿ ತಪ್ಪಿದ ಕಾರು : ಕಿಶಾನ್ ಶೆಟ್ಟಿ ಹಾಗೂ ಅವರ ಸ್ನೇಹಿತರು  ನೆಲಮಂಗಲ  ಹಾಗೂ ಕುಣಿಗಲ್ ಮಾರ್ಗವಾಗಿ ಮಂಗಳೂರಿಗೆ ಹೋಗಬೇಕಾಗಿತ್ತು. ಆದರೆ ದಾರಿ ತಪ್ಪಿ  ತುಮಕೂರಿಗೆ ಹೋಗಿ  ಬಳಿಕ ಹೆಬ್ಬೂರು ಮಾರ್ಗವಾಗಿ ಕುಣಿಗಲ್ ನಿಂದ  ಮಂಗಳೂರಿಗೆ ತೆರಳುತ್ತಿರ ಬೇಕಾದರೆ ಈ ಅವಘಡ ಸಂಭವಿಸಿದೆ. ಅಪಘಾತದಲ್ಲಿ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next