Advertisement

ವಿಜಯಪುರ: ಮಾನಸಿಕ ಖಿನ್ನತೆ; ಇಬ್ಬರು ಮಕ್ಕಳನ್ನು ಬಾವಿಗೆ ತಳ್ಳಿ ಆತ್ಮಹತ್ಯೆ ಮಾಡಿಕೊಂಡ ತಾಯಿ

01:05 PM Jul 13, 2022 | Team Udayavani |

ವಿಜಯಪುರ : ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದಳು ಎನ್ನಲಾದ ತಾಯಿಯೊಬ್ಬಳು ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಬುಧವಾರ ಜಿಲ್ಲೆಯ ಸಿಂದಗಿ ತಾಲೂಕಿನ‌ ಹಂದಿಗನೂರ ಗ್ರಾಮದಲ್ಲಿ ಜರುಗಿದೆ.

Advertisement

ಮಕ್ಕಳನ್ನು ಮೊದಲು ಬಾವಿಗೆ ತಳ್ಳಿ ತಾನೂ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ತಾಯಿಯನ್ನು ಆರು ತಿಂಗಳಿಂದ ಮಾನಸಿಕ‌ ಖಿನ್ನತೆಯಿಂದ ಬಳಲುತ್ತಿದ್ದ ಅವ್ವಮ್ಮಾ ಶ್ರೀಶೈಲ ಗುಬ್ಬೇವಾಡ (32) ಎಂದು ಗುರುತಿಸಲಾಗಿದೆ. 1 ಹಾಗೂ 3 ವರ್ಷದ ಮಕ್ಕಳು ತಾಯಿಯಿಂದ ಜೀವ ಕಳೆದುಕೊಂಡ ನತದೃಷ್ಟರು.

ದುರಂತಕ್ಕೆ ಕಾರಣವಾದ ಮಹಿಳೆಯ ಪತಿ ಶ್ರೀಶೈಲ ಕುರಿ ಕಾಯಲು  ಹೋಗಿದ್ದ ವೇಳೆ ಇಬ್ಬರು ಮಕ್ಕಳೊಂದಿಗೆ ಬಾವಿಗೆ ತೆರಳಿ ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಇದನ್ನೂ ಓದಿ: ಪಶ್ಚಿಮ ಘಟ್ಟ ಕರಡು ಅಧಿಸೂಚನೆ ವಿರೋಧಿಸಿ ಮಲೆನಾಡು ಶಾಸಕರ ಸಭೆ ಕರೆದ ಗೃಹ ಸಚಿವ ಜ್ಞಾನೇಂದ್ರ

ಸುದೈವಶಾತ ಅಮ್ಮವ್ವಳ‌ ಇನ್ನಿಬ್ಬರು  ಹೆಣ್ಣು ಮಕ್ಕಳು ಶಾಲೆಗೆ ಹೋಗಿದ್ದು, ತಾಯಿಯ ದುರಂತ ಘಟನೆಯ ಸುದ್ದಿ ಕೇಳಿ ಕಂಗಾಲಾಗಿದ್ದಾರೆ.

Advertisement

ವಿಷಯ ತಿಳಿಯುತ್ತಲೇ ಸ್ಥಳಕ್ಕೆ ಧಾವಿಸಿರುವ ದೇವರಹಿಪ್ಪರಗಿ ಠಾಣೆ ಪೊಲೀಸರು, ಗ್ರಾಮಸ್ಥರ ನೆರವಿನಿಂದ ಶವಗಳನ್ನು ಬಾವಿಯಿಂದ ಹೊರ ತೆಗೆದಿದ್ದಾರೆ.

ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸಿಂದಗಿ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next