Advertisement

ವಿಟ್ಲ: ತಂದೆ ಮೃತಪಟ್ಟ ಕೆಲವೇ ಗಂಟೆಗಳಲ್ಲಿ ಮಗನೂ ಸಾವು

03:26 PM Jun 02, 2021 | Team Udayavani |

ವಿಟ್ಲ: ತಂದೆ ಮರಣ ಹೊಂದಿದ ಕೆಲವೇ ಗಂಟೆಗಳಲ್ಲಿ ಮಗ ಕೂಡ ಮರಣ ಹೊಂದಿದ ಘಟನೆ ಪುಣಚ ಗ್ರಾಮದ ಬೈಲುಗುತ್ತಿನಲ್ಲಿ ಜೂ.2 (ಬುಧವಾರ)  ರಂದು ಸಂಭವಿಸಿದೆ.

Advertisement

ಪುಣಚ ಗ್ರಾಮದ ಬೈಲುಗುತ್ತು ಕೊಪ್ಪಳ ನಿವಾಸಿ ನಿವೃತ್ತ ಕೆ.ಪಿ.ಟಿ. ಪ್ರೊಫೆಸರ್ ಭುಜಂಗ ಶೆಟ್ಟಿ ಅವರು ಕೋವಿಡ್ ನಿಂದಾಗಿ ಮರಣ ಹೊಂದಿದ್ದರು, ತಂದೆಯ ಅಂತ್ಯಕ್ರಿಯೆ ಸಂದರ್ಭ ಶೈಲೇಶ್ ಅವರು ಕುಸಿದು ಬಿದ್ದ ಕಾರಣ ಅವರನ್ನು ತತ್ ಕ್ಷಣ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟರು.

ಎರಡು ತಿಂಗಳ ಹಿಂದೆಯಷ್ಟೇ ಊರಿಗೆ ಬಂದಿದ್ದರು…!
ಡಿಪ್ಲೋಮಾ ಇನ್ ಮೆಕಾನಿಕಲ್ ವಿದ್ಯಾಭ್ಯಾಸ ಪಡೆದಿರುವ ಶೈಲೇಶ್ ಶೆಟ್ಟಿಯವರು ಕಳೆದ ಹಲವು ವರ್ಷಗಳಿಂದ ಆಸ್ಟ್ರೇಲಿಯಾದಲ್ಲಿ ಉನ್ನತ ಉದ್ಯೋಗದಲ್ಲಿದ್ದರು. ಕಳೆದ ಎರಡು ತಿಂಗಳ ಹಿಂದೆಯಷ್ಟೇ ಊರಿಗೆ ಬಂದಿದ್ದು ಹಾರಾಡಿಯಲ್ಲಿರುವ ಮನೆಯಲ್ಲಿ ವಾಸ್ತವ್ಯವಿದ್ದರು

ಇದನ್ನೂ ಓದಿ:  ಹೊಂಬಾಡಿ ಮಂಡಾಡಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಸಂಪೂರ್ಣ ಲಾಕ್‌ಡೌನ್‌

Advertisement

Udayavani is now on Telegram. Click here to join our channel and stay updated with the latest news.

Next