Advertisement

ಎಡಮಂಗಲ: ದ್ವಿಚಕ್ರ ವಾಹನಕ್ಕೆ ಅಡ್ಡ ಬಂದ ನಾಯಿ; ಸಹ ಸವಾರ ಸಾವು

05:09 PM Nov 17, 2021 | Team Udayavani |

ಕಾಣಿಯೂರು:  ನಾಯಿಯೊಂದು ದ್ವಿಚಕ್ರ ವಾಹನಕ್ಕೆ ಅಡ್ಡಬಂದ ಪರಿಣಾಮ ಬೈಕಿನ ಹಿಂಬದಿ ಕೂತಿದ್ದ ಸಹ ಸವಾರ ಬಿದ್ದು ಮೃತಪಟ್ಟ ಘಟನೆ ಚಾರ್ವಾಕ-ಎಡಮಂಗಲ ರಸ್ತೆಯಲ್ಲಿ ಬುಧವಾರ ನಡೆದಿದೆ.

Advertisement

ಸುರೇಶ (53) ಮೃತ ದುರ್ಧೈವಿ ಎಂದು ತಿಳಿದು ಬಂದಿದೆ.

ಘಟನೆಯ ವಿವರ:

ಕಡಬ ತಾಲೂಕು ಎಡಮಂಗಲ ಗ್ರಾಮದ ಎಡಮಂಗಲ-ಚಾರ್ವಕ ರಸ್ತೆಯಲ್ಲಿ ಎಡಮಂಗಲದಿಂದ ಕೊಳಂಬೆ ಎಂಬಲ್ಲಿಗೆ ರಬ್ಬರ್ ಟ್ಯಾಪಿಂಗ್ ವೃತ್ತಿ ಮಾಡುವ ಸಲುವಾಗಿ ಸಂತೋಷ್ ಎಂಬವರು ಅವರ ಅಣ್ಣ ಸುರೇಶ್ ಎಂಬವರನ್ನು ಸಹ ಸವಾರನನ್ನಾಗಿ ಕುಳ್ಳಿರಿಸಿಕೊಂಡು ಸವಾರಿ ಮಾಡುತ್ತಿದ್ದ ಬೈಕಿಗೆ ರಸ್ತೆ ಮಧ್ಯ ಏಕಾಏಕಿ ನಾಯಿಯೊಂದು ಅಡ್ಡ ಬಂದಿದೆ. ಈ ವೇಳೆ ಬೈಕ್ ನಿಯಂತ್ರಣ ತಪ್ಪಿ ಬಿದ್ದ ಪರಿಣಾಮ ಹಿಂಬದಿ ಕೂತಿದ್ದ ಸುರೇಶ್ ಅವರು ರಸ್ತೆಗೆ ಮಗುಚಿ ಬಿದ್ದಿದ್ದಾರೆ. ತಲೆಗೆ ಗಂಭೀರವಾದ ಪೆಟ್ಟಾದ ಕಾರಣ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಈ ಕುರಿತು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next