Advertisement

ದೇವರ ದರ್ಶನದಿಂದ ಹಿಂತಿರುಗುವಾಗ ಎದುರಾದ ಜವರಾಯ; ಟ್ರ್ಯಾಕ್ಟರ್ ಪಲ್ಟಿ ಹೊಡೆದು ಇಬ್ಬರ ಸಾವು

02:08 PM Dec 22, 2021 | Team Udayavani |

ಕೆಆರ್ ಪೇಟೆ: ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ವೊಂದು ಪಲ್ಟಿ ಹೊಡೆದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತಾಲೂಕಿನ ಬೀರವಳ್ಳಿ ಗ್ರಾಮದಲ್ಲಿ ನಡೆದಿದೆ.

Advertisement

ತಮ್ಮೇಗೌಡ (45), ಬಲರಾಮ್ (11) ಸ್ಥಳದಲ್ಲೆ ಮೃತಪಟ್ಟ ದುರ್ದೈವಿಗಳು.

ಶ್ರೀ ಚಂದಗೋಳಮ್ಮ ದೇವಾಲಯಕ್ಕೆ ಕೆಆರ್ ನಗರ ತಾಲೂಕಿನಿಂದ ಹರಕೆ ರೂಪದಲ್ಲಿ ದೇವಾಲಯಕ್ಕೆ ಪರ ನೆರವೇರಿಸಿ ಹಿಂತಿರುಗುವಾಗ ರಾತ್ರಿ ಸಮಯದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟ್ಯಾಕ್ಟರ್ ಪಲ್ಟಿ ಹೊಡೆದ ಪರಿಣಾಮ ಟ್ರ್ಯಾಕ್ಟರ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಘಟನೆಯಲ್ಲಿ ಮೂವರಿಗೆ ತೀವ್ರಸ್ವರೂಪದ ಗಾಯಗೊಂಡ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗೆ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ.

Advertisement

ಸುದ್ದಿ ತಿಳಿಯುತ್ತಿದ್ದಂತೆ ಕೆಆರ್ ಪೇಟೆ ಗ್ರಾಮಾಂತರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಹೆಚ್ಚಿನ ತನಿಖೆಗಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next