Advertisement

Train;ಬೆಂಗಳೂರು-ಮೈಸೂರು ಮಾರ್ಗದ ಎಲ್ಲಾ ರೈಲುಗಳು ಸ್ಥಗಿತ: ಪ್ರಯಾಣಿಕರಿಗೆ ಅನಾನುಕೂಲ

09:09 AM Jul 10, 2024 | Team Udayavani |

ರಾಮನಗರ: ಬೆಂಗಳೂರಿನ ಚೆಲ್ಲಘಟ್ಟ ಬಳಿ ರೈಲ್ವೆ ಅಂಡರ್ ಪಾಸ್ ನಿರ್ಮಾಣ ಕಾಮಗಾರಿ ಹಿನ್ನೆಲೆ ಯಲ್ಲಿ ಬೆಂಗಳೂರು-ಮೈಸೂರು ಮಾರ್ಗದ ಎಲ್ಲಾ ರೈಲು ಗಳನ್ನು ಮಂಗಳವಾರ ರಾತ್ರಿ 10 ಗಂಟೆಯಿಂದ ಬುಧವಾರ ಬೆಳಗ್ಗೆ 9 ಗಂಟೆಯ ವರೆಗೆ ಸ್ಥಗಿತ ಮಾಡಲಾಗಿದೆ.

Advertisement

ಎಲ್ಲಾ ರೈಲುಗಳ ಸಂಚಾರ ಬಂದ್ ಆಗಿರುವುದರಿಂದ 10 ರಿಂದ 12 ಸಾವಿರ ಪ್ರಯಾಣಿಕರಿಗೆ ಅನಾನುಕೂಲವಾಗಿದೆ. ಬೆಂಗಳೂರಿಗೆ ಹೋಗಬೇಕಿರುವ ರೈಲುಗಳು ಶೆಟ್ಟಿಹಳ್ಳಿ, ಚನ್ನಪಟ್ಟಣ, ರಾಮನಗರ, ಬಿಡದಿ ರೈಲು ನಿಲ್ದಾಣ ಗಳಲ್ಲಿ ನಿಲುಗಡೆ ಮಾಡಲಾಗಿದೆ.

ಬೆಳಗ್ಗೆ 5 ಗಂಟೆಗೆ ಮುಗಿಯ ಬೇಕಿದ್ದ ಕಾಮಗಾರಿ ವಿಳಂಬವಾದ ಹಿನ್ನೆಲೆಯಲ್ಲಿ ರೈಲು ಸಂಚಾರಕ್ಕೆ ಸಮಸ್ಯೆಯಾಗಿದೆ.
ಬೆಂಗಳೂರಿನಿಂದ ಮೈಸೂರಿಗೆ ತೆರಳ ಬೇಕಿದ್ದ 12 ಕ್ಕೂ ಹೆಚ್ಚು ರೈಲುಗಳು ಸ್ಥಗಿತವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next