Advertisement

Train; ದೀಪಾವಳಿಗೆ ಬೆಂಗಳೂರು- ಕಾರವಾರ ವಿಶೇಷ ರೈಲು

06:00 PM Oct 18, 2024 | Team Udayavani |

ಉಡುಪಿ: ದೀಪಾವಳಿ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಕೊಂಕಣ ರೈಲ್ವೇ ಅ.30ರಂದು ಬೆಂಗಳೂರು-ಕಾರವಾರ ವಿಶೇಷ ರೈಲು ಸಂಚಾರಕ್ಕೆ ಮುಂದಾಗಿದೆ.

Advertisement

ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ವಿಶೇಷ ರೈಲು ವ್ಯವಸ್ಥೆ ಮಾಡಲಾಗಿದೆ. ಸರ್‌.ಎಂ.ವಿಶ್ವೇಶ್ವರಯ್ಯ ಟರ್ಮಿನಲ್‌ನಿಂದ ಅ.30ರ ಮಧ್ಯಾಹ್ನ 1 ಗಂಟೆಗೆ ರೈಲು ಹೊರಡಲಿದ್ದು, ಮಾರನೆ ದಿನ ಬೆಳಗ್ಗೆ 4 ಗಂಟೆಗೆ ಕಾರವಾರ ತಲುಪಲಿದೆ. ಅ.31ರಂದು ಕಾರವಾರದಿಂದ ಮಧ್ನಾಹ್ನ 12 ಗಂಟೆಗೆ ಹೊರಟು ಮಾರನೆ ದಿನ ಬೆಳಗ್ಗೆ 4ಕ್ಕೆ ಬೆಂಗಳೂರು ತಲುಪಲಿದೆ.

ಚಿಕ್ಕಬಾಣಾವರ, ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರಸ್ತೆ, ಕಬಕಪುತ್ತೂರು, ಬಂಟ್ವಾಳ, ಸುರತ್ಕಲ್, ಮೂಲ್ಕಿ, ಉಡುಪಿ, ಬಾರ್ಕೂರು, ಕುಂದಾಪುರ, ಮೂಕಾಂಬಿಕಾ ರಸ್ತೆ ಬೈಂದೂರು, ಭಟ್ಕಳ, ಮುರ್ಡೇಶ್ವರ, ಹೊನ್ನಾವರ, ಕುಮಟಾ, ಗೋಕರ್ಣ ರಸ್ತೆ ಮತ್ತು ಅಂಕೋಲಾ ನಿಲ್ದಾಣಗಳಲ್ಲಿ ನಿಲ್ಲಲಿದೆ.

Advertisement

Udayavani is now on Telegram. Click here to join our channel and stay updated with the latest news.

Next