Advertisement

ಬಂಟ್ವಾಳ: ರೈಲು ಡಿಕ್ಕಿ ಹೊಡೆದು ವ್ಯಕ್ತಿ ಮೃತ್ಯು

11:13 AM Sep 16, 2022 | Team Udayavani |

ಬಂಟ್ವಾಳ: ರೈಲು ಡಿಕ್ಕಿಯಾಗಿ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಬಂಟ್ವಾಳ ನಗರ ಪೊಲೀಸ್‌  ಠಾಣೆಯ ಪುರಸಭಾ ವ್ಯಾಪ್ತಿಯ ಮೊಡಂಕಾಪು ಎಂಬಲ್ಲಿ ನಡೆದಿದೆ.

Advertisement

ಮಂಡಾಡಿ ನಿವಾಸಿ ಪ್ರವೀಣ್ ಪೂಜಾರಿ (40) ಮೃತಪಟ್ಟ ವ್ಯಕ್ತಿ.

ಪ್ರವೀಣ್ ಅವರು ಕೆಲ ಕಾಲದಿಂದ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದರು ಎನ್ನಲಾಗಿದ್ದು, ರೈಲ್ವೆ ಹಳಿಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭ ಈ ಘಟನೆ ನಡೆದಿರಬಹುದು ಎಂದು ಶಂಕಿಸಲಾಗಿದೆ.

ಪ್ರವೀಣ್ ತಲೆಗೆ ಬಲವಾದ ರೈಲಿನ ಏಟು ಬಿದ್ದ ಪರಿಣಾಮ ರಕ್ತ ಸೋರಿಕೆಯಿಂದ ಮೃತಪಟ್ಟಿರಬೇಕು ಎಂದು ಶಂಕೆ ವ್ಯಕ್ತವಾಗಿದ್ದು, ರೈಲು ಡಿಕ್ಕಿಯಾಗಿ ಈತ  ಪಕ್ಕದ ಪೊದೆಗೆ ಬಿದ್ದಿದ್ದರು ಎಂದು ತಿಳಿದು ಬಂದಿದೆ. ಸ್ಥಳೀಯರು ನೋಡಿ ಬಂಟ್ವಾಳ ನಗರ ಠಾಣಾ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ನಗರ ಠಾಣಾ ಎಸ್. ಐ.ಅವಿನಾಶ್ ಸ್ಥಳಕ್ಕೆ ಭೇಟಿ ‌ನೀಡಿ, ವ್ಯಕ್ತಿಯ ಗುರುತು ಪತ್ತೆ ಹಚ್ಚಿ, ಬಳಿಕ ರೈಲ್ವೆ ಇಲಾಖೆಗೆ ಮಾಹಿತಿ ನೀಡಿದ್ದಾರೆ.

Advertisement

 

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next