Advertisement

ಕಾಪು: ರೈಲು ಡಿಕ್ಕಿ ಹೊಡೆದು ವ್ಯಕ್ತಿ ಸಾವು

02:47 PM Nov 26, 2021 | Team Udayavani |

ಕಾಪು:  ಮಲ್ಲಾರು ಗ್ರಾಮದ ಕುಡ್ತಿಮಾರು ಉರ್ದು ಶಾಲೆಯ ಬಳಿಯ ರೈಲ್ವೇ ಹಳಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೋರ್ವ ರೈಲು ಢಿಕ್ಕಿ ಹೊಡೆದು ಮೃತಪಟ್ಟ ಘಟನೆ ಶುಕ್ರವಾರ ಮುಂಜಾನೆ ನಡೆದಿದೆ.

Advertisement

ಮಲ್ಲಾರು – ಪಕೀರಣಕಟ್ಟೆ ಎಂ.ಜೆ.ಎಂ ಮಸೀದಿ ಹತ್ತಿರದ ನಿವಾಸಿ ಅಬ್ದುಲ್ ರಜಾಕ್ (48) ಮೃತ ವ್ಯಕ್ತಿ.

ಶುಕ್ರವಾರ ಬೆಳಿಗ್ಗೆ 06:30 ಗಂಟೆಯಿಂದ 08:00 ಗಂಟೆಯ ‌ನಡುವೆ ಉಡುಪಿಯಿಂದ ಮಂಗಳೂರು ಕಡೆಗೆ ಹೋಗುವ ಯಾವುದೋ ರೈಲು ಡಿಕ್ಕಿ ಹೊಡೆದಿದ್ದು, ಗಂಭೀರ ಗಾಯಗೊಂಡ ಅವರು ಸ್ಥಳದಲ್ಲಿಯೇ ಮೃತಪಟ್ಟಿರುವುದಾಗಿ ಹೇಳಲಾಗಿದೆ.

ಇದನ್ನೂ ಓದಿ:ಮಾಜಿ ಶಾಸಕರ ಕಾಂಪ್ಲೆಕ್ಸ್ ನಲ್ಲಿ ಲಕ್ಷಾಂತರ ರೂ. ಕಳ್ಳತನ: ಸಿಸಿ ಟಿವಿಯಲ್ಲಿ ಸೆರೆ

ಕಾಪು‌ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಆಪತ್ಬಾಂಧವ ಸೂರಿ ಶೆಟ್ಟಿ ಅವರ ಸಹಕಾರದೊಂದಿಗೆ ಮೃತ ದೇಹವನ್ನು ತೆರವುಗೊಳಿಸಲಾಯಿತು. ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next