Advertisement

ಬೆಳಗಾವಿ ತಲುಪಿದ ರೈಲು

05:10 AM May 23, 2020 | Suhan S |

ಬೆಳಗಾವಿ: ಲಾಕ್‌ಡೌನ್‌ದಿಂದಾಗಿ ಎರಡು ತಿಂಗಳಿಂದ ಪ್ರಯಾಣಿಕರ ರೈಲು ಇಲ್ಲದೇ ಬಿಕೋ ಎನ್ನುತ್ತಿದ್ದ ಬೆಳಗಾವಿ ರೈಲ್ವೆ ನಿಲ್ದಾಣದಲ್ಲಿ ಬೆಂಗಳೂರಿನಿಂದ 171 ಕಾರ್ಮಿಕರನ್ನು ಹೊತ್ತುಕೊಂಡು ಶುಕ್ರವಾರ ಸಂಜೆ ರೈಲು ಆಗಮಿಸಿತು.

Advertisement

ಲಾಕ್‌ಡೌನ್‌ ಸಡಿಲಿಕೆ ಮಾಡಿದ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಅಂತರ ಜಿಲ್ಲಾ ರೈಲು ಸೇವೆಗೆ ಒಲವು ತೋರಿದ್ದರಿಂದ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅವರು ರೈಲ್ವೆ ಸಂಚರಿಸಲು ಆದೇಶಿಸಿದ್ದರು. ಇದರಿಂದಾಗಿ ಶುಕ್ರವಾರ ಬೆಳಗ್ಗೆ 8 ಗಂಟೆಗೆ ಬೆಂಗಳೂರಿನಿಂದ ಪ್ರಯಾಣ ಬೆಳೆಸಿದ್ದ ರೈಲು ಸಂಜೆ 7 ಗಂಟೆಗೆ ಬೆಳಗಾವಿ ತಲುಪಿತು.

ಬೆಂಗಳೂರು-ಬೆಳಗಾವಿ ಸೂಪರ್‌ಫಾಸ್ಟ್‌ ಎಕ್ಸಪ್ರಸ್‌ ರೈಲು ಬೆಳಗಾವಿಗೆ ಆಗಮಿಸುತ್ತಿದ್ದಂತೆ ರೈಲ್ವೆ ಸಿಬ್ಬಂದಿ ಬರಮಾಡಿಕೊಂಡರು. ರೈಲುಬರುತ್ತಿರುವ ಹಿನ್ನೆಲೆಯಲ್ಲಿ ನಿಲ್ದಾಣದಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಜತೆಗೆ ಕ್ರಿಮಿನಾಶಕ ಔಷಧಿ  ಸಿಂಪಡಿಸುವ ಚೇಂಬರ್‌ ಅಳವಡಿಸಲಾಗಿತ್ತು. ಸಾಮಾಜಿಕ ಅಂತರ ಕಾಯ್ದುಕೊಂಡು ನಿಲ್ದಾಣಕ್ಕೆ ಬಂದ ಪ್ರಯಾಣಿಕರು ಮಾಸ್ಕ್ ಗಳನ್ನು ಧರಿಸಿದ್ದರು. ಬಿಜೆಪಿ ಕಾರ್ಯಕರ್ತರು ಪ್ರಯಾಣಿಕರಿಗೆ ಮಾಸ್ಕ್ ವಿತರಿಸಿದರು.

ಇದೇ ರೈಲು ಮೇ 23ರಂದು ಬೆಳಗ್ಗೆ 8 ಗಂಟೆಗೆ ಬೆಳಗಾವಿಯಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದೆ. ಈಗಾಗಲೇ 300 ಪ್ರಯಾಣಿಕರು ಬೆಂಗಳೂರಿಗೆ ಹೋಗಲು ಮುಂಗಡ ಬುಕ್ಕಿಂಗ್‌ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next