Advertisement

ಶರಣಬಸವ ಕಾಲೇಜಿನಲ್ಲಿ ತರಬೇತಿ ಶಿಬಿರ

12:33 PM Dec 07, 2021 | Team Udayavani |

ಸುರಪುರ: ಸ್ಪರ್ಧಾತ್ಮ ಯುಗದಲ್ಲಿ ಯಶಸ್ಸು ಗಳಿಸಬೇಕಾದರೆ ವಿದ್ಯಾರ್ಥಿಗಳು ಕಠಿಣ ಪರಿಶ್ರಮ ಪಡಬೇಕು. ವಿದ್ಯಾರ್ಥಿಗಳ ಉಜ್ವಲ ಭವಿಷ್ಯ ರೂಪಿಸುವ ಉದ್ದೇಶದಿಂದ ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಶಿಬಿರ ಆಯೋಜಿಸಲಾಗಿದೆ ಎಂದು ಕಲಬುರಗಿ ಶರಣಬಸವೇಶ್ವರ ಸಂಸ್ಥಾನದ ಲಿಂಗರಾಜಪ್ಪ ಅಪ್ಪಾ ಹೇಳಿದರು.

Advertisement

ಹಸನಾಪುರ ಶರಣಬಸವ ಪದವಿ ಕಾಲೇಜಿನಲ್ಲಿ ಏರ್ಪಡಿಸಿದ್ದ ಸ್ಪರ್ಧಾತ್ಮ ಪರೀಕ್ಷೆ ತರಬೇತಿ ಶಿಬಿರ ಉದ್ಘಾಟಿಸಿ ಅವರು ಮಾತನಾಡಿ, ಉತ್ತಮ ಭವಿಷ್ಯ ರೂಪಿಸಿಕೊಳ್ಳುವ ಮುಂದಾಲೋಚನೆ ಅಗತ್ಯ. ಉನ್ನತ ಹುದ್ದೆ ಪಡೆದುಕೊಂಡು ಕಲಿತ ಕಾಲೇಜಿಗೆ, ಗುರು-ಹಿರಿಯರಿಗೆ, ತಂದೆ-ತಾಯಿಗೆ ಹೆಸರು ತರಬೇಕು ಎಂದರು. ದೊಡ್ಡಪ್ಪ ಎಸ್‌. ನಿಷ್ಠಿ ಜಹಾಗೀರದಾರ ಮಾತನಾಡಿದರು.

ಇದೇ ವೇಳೆ ಬಿಕಾಂ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಹೂಗುಚ್ಚಿ ನೀಡಿ ಸ್ವಾಗತಿಸಲಾಯಿತು. ಪ್ರಾಚಾರ್ಯ ನಾನಾಗೌಡ ದೇಸಾಯಿ ಮಾತನಾಡಿದರು. ನಿಷ್ಠಿ ಎಂಜಿನಿಯರಿಂಗ್‌ ಕಾಲೇಜಿನ ಪ್ರಾಚಾರ್ಯ ಡಾ| ರವೀಂದ್ರಕುಮಾರ ನಾಗರಾಳೆ, ಪ್ರೊ| ಅನಿಲಕುಮಾರ ಪಾಟೀಲ, ಮುಖ್ಯೋಪಾಧ್ಯಾಯೆ ರತ್ನಾಮ್ಮ, ವಿವಿಧ ವಿಭಾಗಗಳ ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next