Advertisement
ಬೆಂಗಳೂರಿನ ವಿಶ್ವೇಶ್ವರಯ್ಯ ವ್ಯಾಪಾರ ಉತ್ತೇಜನ ಕೇಂದ್ರ, ಜಿಲ್ಲಾ ಕೈಗಾರಿಕಾ ಕೇಂದ್ರ, ಮೈಸೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಹಾಗೂ ಜಿಲ್ಲಾ ಕೈಗಾರಿಕಾ ಸಂಘದ ವತಿಯಿಂದ ನಗರದ ಎಂಜಿನಿಯರುಗಳ ಸಂಸ್ಥೆಯಲ್ಲಿ ಕೈಗಾರಿಕೋದ್ಯಮಿಗಳು, ವಾಣಿಜ್ಯೋದ್ಯಮಿಗಳು ಹಾಗೂ ಬಾವಿ ರಫ್ತುದಾರರಿಗಾಗಿ ಆಯೋಜಿ ಸಿರುವ ರಫ್ತು ನಿರ್ವಹಣಾ ತರಬೇತಿ ಕಾರ್ಯಕ್ರಮಕ್ಕೆ ಸೋಮವಾರ ಚಾಲನೆ ನೀಡಿ ಮಾತನಾಡಿದರು.
Related Articles
Advertisement
ಹೀಗಾಗಿ ಉದ್ಯಮಿಗಳು ಈ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಂಡು ಉದ್ಯಮ ಕ್ಷೇತ್ರದಲ್ಲಿ ಪ್ರಗತಿ ಸಾಧಿಸಬೇಕು. ಕೇವಲ ಸಾಲ ಸೌಲಭ್ಯ ಮಾತ್ರವಲ್ಲದೆ ಉದ್ಯಮ ಕ್ಷೇತ್ರದ ಅಭಿವೃದ್ಧಿಗಾಗಿ ಸರ್ಕಾರದ ಅನೇಕ ಯೋಜನೆಗಳನ್ನು ಉದ್ಯಮಿಗಳು ಸೂಕ್ತ ರೀತಿಯಲ್ಲಿ ಸದುಪಯೋಗ ಮಾಡಿಕೊಳ್ಳಬೇಕು ಎಂದರು.
ಅಲ್ಲದೆ ಸರ್ಕಾರದ ಯೋಜನೆಗಳನ್ನು ಪಡೆಯುವ ಸಂದರ್ಭದಲ್ಲಿ ಕೆಲವೊಂದು ಕಾರಣದಿಂದ ವಿಳಂಬವಾಗುವ ಸಾಧ್ಯತೆಗಳಿದ್ದು, ಉದ್ಯಮಿಗಳು ಇದರಿಂದ ನಿರಾಶೆಗೊಳ್ಳದೆ ಉದ್ಯಮ ಆರಂಭದ ಬಗ್ಗೆ ನಿಗಾವಹಿಸಬೇಕು. ಪ್ರಮುಖವಾಗಿ ಉದ್ಯಮಿಗಳು ಬ್ಯಾಂಕಿನಿಂದ ಪಡೆದ ಸಾಲವನ್ನು ಸರಿಯಾದ ರೀತಿಯಲ್ಲಿ ಹಿಂದಿರುಗಿಸುವ ಮೂಲಕ ಬ್ಯಾಂಕಿನೊಂದಿಗೆ ಉತ್ತಮ ವಹಿವಾಟು ಹೊಂದಿದ್ದರೆ ಮುಂದಿನ ದಿನಗಳಲ್ಲಿ ಹೆಚ್ಚಿನ ಅನುಕೂಲ ಪಡೆಯಬಹುದು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಎಚ್.ರಾಮಕೃಷ್ಣೇಗೌಡ, ಮೈಸೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಅಧ್ಯಕ್ಷ ಎ.ಎಸ್.ಸತೀಶ್, ಕೊಡಗು ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಅಧ್ಯಕ್ಷ ಬಿ.ಎನ್.ಪ್ರಕಾಶ್, ಹೆಬ್ಟಾಳು ಕೈಗಾರಿಕೋದ್ಯಮಿಗಳ ವಸಾಹತು ತಯಾರಕರ ಸಂಘದ ಅಧ್ಯಕ್ಷ ಎನ್.ಎಚ್.ಜಯಂತ್, ಎಂಜಿನಿಯರುಗಳ ಸಂಸ್ಥೆ ಅಧ್ಯಕ್ಷ ಎಂ.ಚಿನ್ನಸ್ವಾಮಿ, ಮೈಸೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಕಾರ್ಯದರ್ಶಿ ಶ್ರೀಶೈಲರಾಮಣ್ಣವರ, ಪ್ರಧಾನ ಕಾರ್ಯದರ್ಶಿ ಎನ್.ಸತೀಶ್ ಇನ್ನಿತರರು ಭಾಗವಹಿಸಿದ್ದರು.