Advertisement

ಜವಾಬ್ದಾರಿಯಿಂದ ಕೆಲಸ ಮಾಡಿ : ಜಿಲ್ಲಾಧಿಕಾರಿ

07:57 PM Dec 18, 2020 | Suhan S |

ಚಿಕ್ಕಬಳ್ಳಾಪುರ: ಗ್ರಾಪಂ ಚುನಾವಣೆಗಳನ್ನು ಲಘುವಾಗಿ ಪರಿಗಣಿಸದೆ ಚುನಾವಣಾ ಆಯೋಗ ನೀಡಿರುವ ನಿರ್ದೇಶನ ಮತ್ತು ಮಾರ್ಗಸೂಚಿಗಳನ್ವಯ ಕಾರ್ಯನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ಆರ್‌.ಲತಾ ಸೂಚನೆ ನೀಡಿದರು.

Advertisement

ಶಿಡ್ಲಘಟ್ಟ ನಗರದ ಸರ್ಕಾರಿ ಪ್ರೌಢಶಾಲೆಯಲ್ಲಿ ಗ್ರಾಪಂ ಚುನಾವಣೆಯ ಮತಗಟ್ಟೆಯ ಪಿಆರ್‌ ಒ-ಎಪಿಆರ್‌ಒಗಳಿಗೆ ಆಯೋಜಿಸಿದ್ದ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.ಗ್ರಾಪಂಚುನಾವಣೆಯನ್ನುಸುಸೂತ್ರವಾಗಿ ನಡೆಸಲು ಆಯೋಗದಿಂದ ಮಾರ್ಗಸೂಚಿ ಮತ್ತು ಆದೇಶಗಳ ಕೈಪಿಡಿಯನ್ನು ಲೋಪದೋಷವಾಗದಂತೆ ಎಚ್ಚರಿಕೆಯಿಂದ ಕಾರ್ಯನಿರ್ವಹಿಸ ಬೇಕೆಂದು ಸೂಚನೆ ನೀಡಿದರು.

ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಪಿಆರ್‌ಒಗಳಾಗಿ ನೇಮಕಗೊಂಡಿರುವುದಕ್ಕೆ ಸ್ಪಷ್ಟಪಡಿಸಿ ಗಂಭೀರಆರೋಗ್ಯ ಸಮಸ್ಯೆ ಇರುವವರಿಗೆ ಪರಿಶೀಲಿಸಿ ಪರ್ಯಾಯ ವ್ಯವಸ್ಥೆ ಮಾಡುವುದಾಗಿ ತಿಳಿಸಿದರು. ತಹಶೀಲ್ದಾರ್‌ ಕೆ.ಅರುಂಧತಿ, ಉಪ ತಹಶೀಲ್ದಾರ್‌ ಮಂಜುನಾಥ್‌,ಕ್ಷೇತ್ರ ಶಿಕ್ಷಣಾಧಿಕಾರಿಆರ್‌.ಶ್ರೀನಿವಾಸ್‌, ಚುನಾವಣಾ ಶಾಖೆಯಸಾದಿಕ್‌ಪಾಷ, ತಾಲೂಕು ಸರ್ಕಾರಿ ನೌಕರರಸಂಘದ ಅಧ್ಯಕ್ಷ ಕೆ.ಎನ್‌.ಸುಬ್ಟಾರೆಡ್ಡಿ, ತಾಲೂಕು ಪ್ರಾಥಮಿಕ ಶಿಕ್ಷಕರ ಸಂಘದ ಮುನಿರಾಜು, ತಾಲೂಕು ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಬೆ„ರಾರೆಡ್ಡಿ, ತಾಲೂಕು ಎನ್‌.ಪಿ.ಎಸ್‌ನೌಕರರಸಂಘದಅಧ್ಯಕ್ಷಗಜೇಂದ್ರ,ಕಾರ್ಯದರ್ಶಿ ನರಸಿಂಹಮೂರ್ತಿ, ರಾಜಸ್ವ ನಿರೀಕ್ಷಕ ಪ್ರಶಾಂತ್‌ ಮತಗಟ್ಟೆಯ ಪಿಆರ್‌ಒ-ಎಪಿಆರ್‌ಒಗಳು ಉಪಸ್ಥಿತರಿದ್ದರು.

ತಹಶೀಲ್ದಾರ್ ಗ್ರೇಡ್‌-1, ಗ್ರೇಡ್‌-2 ವರ್ಗಾವಣೆ :

ಚಿಕ್ಕಬಳ್ಳಾಪುರ: ಗ್ರಾಮ ಪಂಚಾಯತಿ ಚುನಾವಣಾ ಮಾರ್ಗಸೂಚಿಗಳ ಅನ್ವಯ ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಸರ್ಕಾರ 89 ತಹಶೀಲ್ದಾರ್‌ ಗ್ರೇಡ್‌-1 ಮತ್ತು ಗ್ರೇಡ್‌-2 ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

Advertisement

ಗ್ರಾಪಂ ಚುನಾವಣೆಹಿನ್ನೆಲೆಯಲ್ಲಿ ತಹಶೀಲ್ದಾರ್‌ ಗ್ರೇಡ್‌-1ಮತ್ತುಗ್ರೇಡ್‌-2ಅವರನ್ನುವರ್ಗಾವಣೆ ಮಾಡಲಾಗಿದ್ದು, ಚುನಾವಣೆ ಪ್ರಕ್ರಿಯೆ ಮುಗಿದ ಬಳಿಕ ಹಿಂದಿನ ಹುದ್ದೆಗೆ ಹಾಜರಾಗತಕ್ಕದು ಎಂದು ಕಂದಾಯ ಇಲಾಖೆಯ ಅಧೀನ ಕಾರ್ಯದರ್ಶಿ ರಶ್ಮಿ ಎಂ.ಎಸ್‌ ಆದೇಶ ಹೊರಡಿಸಿದ್ದಾರೆ.ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ತಹಶೀಲ್ದಾರ್‌ ಗ್ರೇಡ್‌-1 ಕೆ.ಅರುಂಧತಿ ಅವರನ್ನು ತುಮಕೂರು ಜಿಲ್ಲಾಧಿಕಾರಿಗಳ ಕಚೇರಿ ತಹಶೀಲ್ದಾರ್‌ ಗ್ರೇಡ್‌-1 ಸ್ಥಾನಕ್ಕೆ ವರ್ಗಾವಣೆ ಮಾಡಲಾಗಿದೆ. ಅವರ ಜಾಗ ದಲ್ಲಿ ತುಮಕೂರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ತಹಶೀಲ್ದಾರ್‌ ಗ್ರೇಡ್‌ -01 ಅನಂತರಾಮು ಜಿ.ಎಸ್‌ ಅವರನ್ನು ಶಿಡ್ಲಘಟ್ಟ ತಹಶೀಲ್ದಾರ್‌ ಗ್ರೇಡ್‌-01 ಆಗಿ ವರ್ಗಾವಣೆ ಮಾಡಲಾಗಿದೆ.

ಚಿಕ್ಕಬಳ್ಳಾಪುರ ತಾಲೂಕಿನ ತಹ ಶೀಲ್ದಾರ್‌ ಗ್ರೇಡ್‌-02 ತುಳಸಿ ಜಿ.ವಿ ಅವರನ್ನು ತುಮಕೂರು ತಾಲೂಕು ಕಚೇರಿಯ ತಹಶೀಲ್ದಾರ್‌ ಗ್ರೇಡ್‌ 02 ಸ್ಥಾನಕ್ಕೆ ವರ್ಗಾವಣೆ ಮಾಡಲಾಗಿದೆ. ಅವರ ಸ್ಥಾನಕ್ಕೆ ದಾವಣಗೆರೆ ಜಿಲ್ಲೆಯ ಗ್ರೇಡ್‌-2 ತಹಶೀಲ್ದಾರ್‌ ದೇವರಾಜು ಕೆ.ಆರ್‌. ಅವರನ್ನು ವರ್ಗಾವಣೆ ಮಾಡಲಾಗಿದೆ. ಜಿಲ್ಲೆಯ ಗುಡಿಬಂಡೆ ತಾಲೂಕಿನ ಗ್ರೇಡ್‌-2 ತಹಶೀಲ್ದಾರ್‌ ಸಿಬತ್ತುಲ್ಲಾ ಅವರನ್ನು ಮಧುಗರಿ ಉಪವಿಭಾಗಾಧಿಕಾರಿಗಳ ಕಚೇರಿಗೆ ವರ್ಗಾವಣೆ ಮಾಡಲಾಗಿದೆ. ಮಧುಗರಿ ಉಪ ವಿಭಾಗಾಧಿ ಕಾರಿಗಳ ಕಚೇರಿಯ ಗ್ರೇಡ್‌-2 ತಹಶೀಲ್ದಾರ್‌ ಡಿ.ಎನ್‌.ವರದರಾಜು ಗುಡಿಬಂಡೆ ತಾಲೂಕಿನ ತಹಶೀಲ್ದಾರ್‌ ಆಗಿ ವರ್ಗಾಯಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next