Advertisement

ವರ್ಗಾವಣೆ: ಜಾರ್ಜ್‌-ಬೈರತಿ ಜಟಾಪಟಿ?

06:46 AM Jul 06, 2019 | Lakshmi GovindaRaj |

ಬೆಂಗಳೂರು: ಕರ್ನಾಟಕ ಸೋಪ್ಸ್‌ ಆಂಡ್‌ ಡಿಟರ್ಜಂಟ್‌ ಎಂ.ಡಿ ವರ್ಗಾವಣೆ ಸಂಬಮಧ ಕೈಗಾರಿಕಾ ಸಚಿವ ಕೆ.ಜೆ.ಜಾರ್ಜ್‌ ಹಾಗೂ ಕೆಎಸ್‌ಡಿಎಲ್‌ ಅಧ್ಯಕ್ಷ ಬೈರತಿ ಬಸವರಾಜ್‌ ನಡುವೆ ಸಂಘರ್ಷ ಏರ್ಪಟ್ಟಿದೆ.

Advertisement

ಕೆಎಸ್‌ಡಿಎಲ್‌ ಎಂ.ಡಿ ರವಿಕುಮಾರ್‌ ಅವರನ್ನು ವರ್ಗಾವಣೆ ಮಾಡುವಂತೆ ಕೆಎಸ್‌ಡಿಎಲ್‌ ಅಧ್ಯಕ್ಷರಾಗಿರುವ ಬೈರತಿ ಬಸವರಾಜ್‌ ಪಟ್ಟು ಹಿಡಿದಿದ್ದಾರೆ. ಅಲ್ಲದೇ ರವಿಕುಮಾರ್‌ ಅವರನ್ನು ಮುಖ್ಯಮಂತ್ರಿಗಳ ಮೂಲಕ ವರ್ಗಾವಣೆ ಮಾಡಿಸಿ, ವಿಜಯಕುಮಾರ್‌ ಶೆಟ್ಟಿ ಅವರನ್ನು ಆ ಸ್ಥಳಕ್ಕೆ ವರ್ಗಾಯಿಸಲಾಗಿದೆ.

ಆದರೆ, ಕೈಗಾರಿಕಾ ಸಚಿವ ಕೆ.ಜೆ.ಜಾರ್ಜ್‌ ರವಿಕುಮಾರ್‌ ವರ್ಗಾವಣೆ ತಡೆ ಹಿಡಿದಿದ್ದು, ಅವರನ್ನು ಅದೇ ಹುದ್ದೆಯಲ್ಲಿ ಮುಂದುವರಿಯಲು ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ. ಹೀಗಾಗಿ ಬೈರತಿ ಬಸವರಾಜ್‌ ಸಚಿವ ಜಾರ್ಜ್‌ ವಿರುದ್ಧ ಏಕವಚನದಲ್ಲಿ ಮಾತನಾಡಿದ್ದಾರೆ ಎಂದು ತಿಳಿದು ಬಂದಿದೆ.

ಅಲ್ಲದೇ ರವಿಕುಮಾರ್‌ ಅವರನ್ನು ವರ್ಗಾಯಿಸದಿದ್ದರೆ, ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ಬೆದರಿಕೆ ಹಾಕಿದ್ದಾರೆ ಎಂದು ತಿಳಿದು ಬಂದಿದೆ. ಈ ಕುರಿತು ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಬಳಿ ಬೈರತಿ ಬಸವರಾಜ್‌ ಅಳಲು ತೋಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next