Advertisement

ಮಂಗಳೂರು, ಪುತ್ತೂರು ಸೇರಿ ಹಲವು ನ್ಯಾಯಾಧೀಶರ ವರ್ಗಾವಣೆ: ಹೈಕೋರ್ಟ್ ಆದೇಶ

03:41 PM Jul 29, 2022 | Team Udayavani |

ಬೆಂಗಳೂರು: 25 ಸಿವಿಲ್‌ ನ್ಯಾಯಾಧೀಶರನ್ನು ವರ್ಗಾವಣೆ ಮಾಡಲಾಗಿದ್ದು, ಹೊಸದಾಗಿ ನೇಮಕಗೊಂಡ 75 ತರಬೇತು ನ್ಯಾಯಾಧೀಶರನ್ನು ವಿವಿಧ ನ್ಯಾಯಾಲಯಕ್ಕೆ ನೇಮಕ ಮಾಡಲಾಗಿದೆ.

Advertisement

ಈ ಬಗ್ಗೆ ಕರ್ನಾಟಕ ಹೈಕೋರ್ಟ್‌ ರಿಜಿಸ್ಟ್ರಾರ್ ಜನರಲ್‌ ಅವರು ಅಧಿಸೂಚನೆ ಹೊರಡಿಸಿದ್ದು, ಈ ಬದಲಾವಣೆ ಆಗಸ್ಟ್‌ 1 ರಿಂದ ಜಾರಿಗೊಳಿಸಲು ಅಧಿಸೂಚನೆಯಲ್ಲಿ ತಿಳಿಸಿದೆ.

ಪ್ರಸ್ತುತ ಮಂಗಳೂರಿನ 3ನೇ ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶೆ ಹಾಗೂ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಆಗಿದ್ದ ಸುಜಾತ ಎಚ್.‌ ಅವರು 2ನೇ ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶೆ ಹಾಗೂ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಆಗಿ ವರ್ಗಾವಣೆಗೊಂಡಿದ್ದಾರೆ. ನಿಖಿತಾ ಎಸ್‌. ಅಕ್ಕಿ ಅವರು 3ನೇ ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶೆ ಹಾಗೂ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಆಗಿ ಕಾರ್ಯ ನಿರ್ವಹಿಸಲಿದ್ದಾರೆ.

ಹೊಸ ನೇಮಕಾತಿಯಲ್ಲಿ ಅಮ್ರೀನ್‌ ಸುಲ್ತಾನ ಅವರನ್ನು ಮಂಗಳೂರಿನ 7 ನೇ ನ್ಯಾಯಾಂಗ ಮ್ಯಾಜಿಸ್ಟ್ರೇಟ್, ವಿಜಯೇಂದ್ರ ಟಿ.ಹೆಚ್.‌ ಅವರನ್ನು ಬೆಳ್ತಂಗಡಿ ತಾಲೂಕಿನ ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶೆ ಹಾಗೂ ನ್ಯಾಯಾಂಗ ಮ್ಯಾಜಿಸ್ಟ್ರೇಟ್, ಯೋಗೇಂದ್ರ ಶೆಟ್ಟಿ ಅವರನ್ನು ಪುತ್ತೂರು ತಾಲೂಕಿನ 2ನೇ ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶ ಹಾಗೂ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಆಗಿ ನೇಮಕಗೊಳಿಸಲಾಗಿದೆ.

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ 2ನೇ ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶೆ ಹಾಗೂ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಆಗಿ ಕೋಮಲಾ ಆರ್.ಸಿ. ಅವರನ್ನು ನೇಮಕಗೊಳಿಸಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next