Advertisement

ಮತ್ತೆ ನಾಲ್ವರು ಐಪಿಎಸ್‌ ಅಧಿಕಾರಿಗಳ ವರ್ಗಾವಣೆ

08:25 AM Aug 02, 2017 | Harsha Rao |

ಬೆಂಗಳೂರು: ನಗರ ಪೊಲೀಸ್‌ ಆಯುಕ್ತರಾಗಿದ್ದ ಪ್ರವೀಣ್‌ ಸೂದ್‌ ಸೇರಿ ಮೂವರು ಹಿರಿಯ ಪೊಲೀಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ ಬೆನ್ನಲ್ಲೇ ಮಂಗಳವಾರ ಮತ್ತೆ ನಾಲ್ವರು ಐಪಿಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಗುಪ್ತಚರ ಇಲಾಖೆಯ ಐಜಿಪಿಯಾಗಿದ್ದ ಅಮೃತ್‌ ಪೌಲ್‌ ಅವರನ್ನು ಬೆಂಗಳೂರು ಕೇಂದ್ರ ವಲಯ ಐಜಿಪಿಯಾಗಿ ವರ್ಗಾವಣೆಗೊಳಿಸಿದ್ದು, ಈ ಸ್ಥಾನದಲ್ಲಿದ್ದ ಸೀಮಂತ್‌ ಕುಮಾರ್‌ ಸಿಂಗ್‌ ಅವರನ್ನು ಬೆಂಗಳೂರು ಪೂರ್ವ
ವಲಯ ಹೆಚ್ಚುವರಿ ಪೊಲೀಸ್‌ ಆಯುಕ್ತರಾಗಿ ನೇಮಿಸಲಾಗಿದೆ. ಪೂರ್ವ ವಲಯ ಹೆಚ್ಚುವರಿ ಪೊಲೀಸ್‌ ಆಯುಕ್ತರಾಗಿದ್ದ ಹೇಮಂತ್‌ ನಿಂಬಾಳ್ಕರ್‌ ಅವರನ್ನು ವರ್ಗಾವಣೆ ಮಾಡಿದ್ದು, ಯಾವುದೇ ಸ್ಥಳ ಸೂಚಿಸಿಲ್ಲ.

Advertisement

ಸಿಐಡಿ ಡಿಐಜಿಯಾಗಿದ್ದ ಎಂ.ಎನ್‌.ನಾಗರಾಜು ಅವರನ್ನು ಹುಬ್ಬಳ್ಳಿ-ಧಾರವಾಡ ನಗರ ಪೊಲೀಸ್‌ ಆಯುಕ್ತರಾಗಿ
ವರ್ಗಾವಣೆ ಮಾಡಲಾಗಿದೆ. ಹೇಮಂತ್‌ ನಿಂಬಾಳ್ಕರ್‌ ಹಾಗೂ ನಾಗರಾಜು ಅವರನ್ನು 7 ತಿಂಗಳ ಹಿಂದಷ್ಟೇ
ವರ್ಗಾಹಿಸಲಾಗಿತ್ತು. ಇದೀಗ ಮತ್ತೂಮ್ಮೆ ವರ್ಗಾವಣೆ ಮಾಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next