Advertisement

ಐಎಎಸ್‌, ಐಪಿಎಸ್‌ ಅಧಿಕಾರಿಗಳ ವರ್ಗಾವಣೆ

10:33 PM Nov 02, 2019 | Lakshmi GovindaRaju |

ಬೆಂಗಳೂರು: ಇಬ್ಬರು ಐಪಿಎಸ್‌ ಹಾಗೂ ಒಬ್ಬ ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಶನಿವಾರ ಆದೇಶ ಹೊರಡಿಸಿದೆ. ಕೆಎಸ್‌ಆರ್‌ಪಿ 9ನೇ ಬೆಟಾಲಿಯನ್‌ನಲ್ಲಿ ಕಮಾಂಡೆಂಟ್‌ ಆಗಿದ್ದ ಎಸ್‌.ಗಿರೀಶ್‌ ಅವರನ್ನು ಬೆಂಗಳೂರು ಪಶ್ಚಿಮ ವಿಭಾಗದ ಡಿಸಿಪಿಯಾಗಿ ವರ್ಗಾವಣೆ ಮಾಡಲಾಗಿದೆ.

Advertisement

ಹಾಗೆಯೇ, ಬೆಂಗಳೂರು ಪಶ್ಚಿಮ ವಲಯದ ಡಿಸಿಪಿಯಾಗಿದ್ದ ಬಿ.ರಮೇಶ್‌ ಅವರನ್ನು ಕೆಎಸ್‌ಆರ್‌ಪಿ 9ನೇ ಬೆಟಾಲಿಯನ್‌ನಲ್ಲಿ ಕಮಾಂಡೆಂಟ್‌ ಆಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಇದರ ಜತೆಗೆ, ಐಎಎಸ್‌ ಅಧಿಕಾರಿ ರಾಮಚಂದ್ರನ್‌ ಅವರನ್ನು ರಾಜ್ಯ ಗೋದಾಮು ನಿಗಮದ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ನೇಮಿಸಲಾಗಿದೆ. ಹಾಗೆಯೇ, ರಾಷ್ಟ್ರೀಯ ಆರೋಗ್ಯ ಮಿಷನ್‌ನ ನಿರ್ದೇಶಕರಾಗಿಯೂ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next