Advertisement

IAS ಅಧಿಕಾರಿಗಳ ವರ್ಗಾವಣೆ

11:14 PM Oct 27, 2023 | Team Udayavani |

ಬೆಂಗಳೂರು: ಕೆಲವು ಐಎಎಸ್‌ ಅಧಿಕಾರಿಗಳನ್ನು ರಾಜ್ಯ ಸರಕಾರ ವರ್ಗಾಯಿಸಿದೆ. ಆರ್ಥಿಕ ನೀತಿ ಸಂಸ್ಥೆಯ ಹೆಚ್ಚುವರಿ ನಿರ್ದೇಶಕಿಯಾಗಿದ್ದ ಪಿ.ಐ. ಶ್ರೀವಿದ್ಯಾ ಅವರನ್ನು ರಾಷ್ಟ್ರೀಯ ಜೀವನೋಪಾಯ ಯೋಜನೆಯ ನಿರ್ದೇಶಕಿಯಾಗಿ ವರ್ಗ ಮಾಡಿದ್ದು, ಈ ಸ್ಥಾನದಲ್ಲಿದ್ದ ಡಾ| ಆರ್‌. ರಾಗಪ್ರಿಯಾ ಅವರನ್ನು ಉದ್ಯೋಗ ಮತ್ತು ತರಬೇತಿ ಆಯುಕ್ತರಾಗಿ ವರ್ಗಾಯಿಸಿದೆ. ಉದ್ಯೋಗ ಮತ್ತು ತರಬೇತಿ ಆಯುಕ್ತೆಯಾಗಿದ್ದ ಕೆ.ಜ್ಯೋತಿ ಅವರನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಅಧ್ಯಕ್ಷೆಯಾಗಿ ವರ್ಗಾ ಯಿಸಿದ್ದು, ಈ ಹುದ್ದೆಯಲ್ಲಿದ್ದ ಆರ್‌.ರಾಮಚಂದ್ರನ್‌ ಅವರನ್ನು ಸ್ಥಳ ತೋರಿಸದೆ ವರ್ಗಾಯಿಸಲಾಗಿದೆ.

Advertisement

ಸಿಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಪ್ರಧಾನ ಕಾರ್ಯದರ್ಶಿ ಮುನೀಶ್‌ ಮೌದ್ಗಿಲ್‌ ಅವರನ್ನು ಬಿಬಿಎಂಪಿ ವಿಶೇಷ ಆಯುಕ್ತ (ಕಂದಾಯ)ರಾಗಿ, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ ಕಾರ್ಯಕಾರಿ ನಿರ್ದೇಶಕಿ ಆರ್‌.ವಿನೋತ್‌ ಪ್ರಿಯಾರನ್ನು ಬಿಬಿಎಂಪಿ ದಕ್ಷಿಣ ವಲಯ ಜಂಟಿ ಆಯುಕ್ತೆಯಾಗಿ ಹಾಗೂ ಬಿಎಂಟಿಸಿ (ಐಟಿ) ನಿರ್ದೇಶಕಿ ಆರ್‌. ಸ್ನೇಹಾಲ್‌ರನ್ನು ಬಿಬಿಎಂಪಿ ಪೂರ್ವ ವಲಯ ಜಂಟಿ ಆಯುಕ್ತರಾಗಿ ವರ್ಗಾಯಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next