Advertisement

ನ್ಯಾ. ಎಸ್‌.ಎನ್‌. ಸತ್ಯನಾರಾಯಣ ವರ್ಗ

10:43 PM Mar 09, 2020 | Team Udayavani |

ಬೆಂಗಳೂರು: ರಾಜ್ಯ ಹೈಕೋರ್ಟ್‌ನ ಹಿರಿಯ ನ್ಯಾಯಮೂರ್ತಿ ಎಸ್‌.ಎನ್‌.ಸತ್ಯನಾರಾಯಣ ಅವರನ್ನು ಪಂಜಾಬ್‌-ಹರಿಯಾಣ ಹೈಕೋರ್ಟ್‌ಗೆ ವರ್ಗಾವಣೆ ಮಾಡಲು ಸುಪ್ರೀಂಕೋರ್ಟ್‌ ಕೊಲಿಜಿಯಂ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಸುಪ್ರೀಂಕೋರ್ಟ್‌ ಕೊಲಿಜಿಯಂ ಮಾ. 5ರಂದು ನಡೆಸಿದ ಸಭೆಯಲ್ಲಿ ನ್ಯಾ. ಸತ್ಯನಾರಾಯಣ ಅವರ ವರ್ಗಾವಣೆಗೆ ಶಿಫಾರಸು ಮಾಡುವ ನಿರ್ಣಯ ಕೈಗೊಂಡಿತು.

Advertisement

ನ್ಯಾ. ಎಸ್‌.ಎನ್‌.ಸತ್ಯನಾರಾಯಣ ಅವರು 1959ರ ಜ.15ರಂದು ಜನಿಸಿದ್ದರು. 1983ರ ಏ.22ರಂದು ವಕೀಲಿ ವೃತ್ತಿ ಆರಂಭಿಸಿದರು. ಸಿವಿಲ್‌ ಹಾಗೂ ಕ್ರಿಮಿನಲ್‌ ಪ್ರಕರಣಗಳಲ್ಲಿ ಪರಿಣಿತರಾದ ಅವರು, ವಿಶೇಷ ಸರ್ಕಾರಿ ಅಭಿಯೋಜಕರಾಗಿಯೂ ಕಾರ್ಯ ನಿರ್ವಹಿಸಿದ್ದರು. 2008ರ ಜೂನ್‌ 9ರಂದು ಹೈಕೋರ್ಟ್‌ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕ ಗೊಂಡ ಅವರು, 2012ರ ಜೂನ್‌ 8ರಂದು ಕಾಯಂ ಆಗಿ ದ್ದರು. ರಾಜ್ಯ ಹೈಕೋರ್ಟ್‌ ನಲ್ಲಿ ಕಳೆದ 11 ವರ್ಷಗಳಿಂದ ನ್ಯಾಯಮೂರ್ತಿಯಾಗಿ ಅವರು ಸೇವೆ ಸಲ್ಲಿಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next