Advertisement

ಹಣ ಪ್ರಕರಣ ಎಸಿಬಿಗೆ ವರ್ಗಾವಣೆ

11:25 AM Jan 08, 2019 | |

ಬೆಂಗಳೂರು: ವಿಧಾನಸೌಧದ ಪಶ್ಚಿಮ ದ್ವಾರದ ಮೂಲಕ 25.76 ಲಕ್ಷ ರೂ. ಹಣ ಸಾಗಿಸುವಾಗ ಸಚಿವರ ಕಚೇರಿ ಸಿಬ್ಬಂದಿ ಸಿಕ್ಕಿಬಿದ್ದಿದ್ದ ಪ್ರಕರಣವನ್ನು ಕೇಂದ್ರ ವಿಭಾಗದ ಪೊಲೀಸರು ಭ್ರಷ್ಟಾಚಾರ ನಿಗ್ರಹ ದಳಕ್ಕೆ ವರ್ಗಾಯಿಸಿದ್ದಾರೆ. ಪ್ರಕರಣದ ಆರೋಪಿ ಮೋಹನ್‌, ಹಿಂದುಳಿದ ವರ್ಗಗಳ ಇಲಾಖೆ ಕಚೇರಿ ಸಿಬ್ಬಂದಿ ಆಗಿರುವುದರಿಂದ ಲಂಚದ ಅನುಮಾನ ವ್ಯಕ್ತವಾಗಿದ್ದು, ಪ್ರಕರಣವನ್ನು ಎಸಿಬಿಗೆ ವಹಿಸಲಾಗಿದೆ.

Advertisement

ಮತ್ತೂಂದೆಡೆ ನಗರ ಪೊಲೀಸ್‌ ಆಯುಕ್ತ ಟಿ.ಸುನೀಲ್‌ ಕುಮಾರ್‌ ಪ್ರಕರಣ ಕುರಿತ ವಿವರವನ್ನು ಗೃಹ ಸಚಿವರು ಹಾಗೂ ರಾಜ್ಯ ಪೊಲೀಸ್‌ ಮಹಾ ನಿರ್ದೇಶಕರಿಗೆ ವಿವರಿಸಿದ ನಂತರವೇ ಪ್ರಕರಣವನ್ನು ಎಸಿಬಿಗೆ ವರ್ಗಾವಣೆ ಮಾಡಲಾಗಿದೆ. ಹಿಂದುಳಿದ ವರ್ಗಗಳ ಇಲಾಖೆ ಕಚೇರಿ ಯಲ್ಲಿ ಟೈಪಿಸ್ಟ್‌ ಆಗಿರುವ ಮೋಹನ್‌ ಡಿ.4ರಂದು ಕೆಲಸ ಮುಗಿಸಿಕೊಂಡು ಬೈಕ್‌ನಲ್ಲಿ ಹೋಗುವಾಗ ಲಕ್ಷಾಂತರ ರೂ. ಹಣದ ಬ್ಯಾಗ್‌ನ್ನು ಕೊಂಡೊಯ್ಯುತ್ತಿದ್ದರು. ಅನುಮಾನ ಗೊಂಡ ಭದ್ರತಾ ಸಿಬ್ಬಂದಿ ಪರಿಶೀಲಿಸಿದಾಗ ಬ್ಯಾಗ್‌ನಲ್ಲಿ 25.76 ಲಕ್ಷ ರೂ. ಹಣ ಪತ್ತೆಯಾಗಿತ್ತು. ಈ ಸಂಬಂಧ ವಿಧಾನಸೌಧ ಠಾಣೆಯಲ್ಲಿ ಪ್ರಕರಣ ದಾಖಲಾಗಿತು

Advertisement

Udayavani is now on Telegram. Click here to join our channel and stay updated with the latest news.

Next