Advertisement

ಅಧಿಕಾರಿಗಳ ವರ್ಗಾವಣೆ

11:40 PM Aug 30, 2019 | Team Udayavani |

ಬೆಂಗಳೂರು: ಐವರು ಐಪಿಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ. ಪ್ರಸ್ತುತ ಕರ್ನಾಟಕ ಪೊಲೀಸ್‌ ಅಕಾಡೆಮಿಯ ನಿರ್ದೇಶಕರಾಗಿರುವ ಐಜಿಪಿ ವಿಪುಲ್‌ ಕುಮಾರ್‌ ಅವರಿಗೆ ಮೈಸೂರು ವಲಯ ಐಜಿಪಿಯಾಗಿ ಹೆಚ್ಚುವರಿ ಹೊಣೆಗಾರಿಕೆ ನೀಡಲಾಗಿದೆ. ಹಾಗೆಯೇ, ಯಡಾ ಮಾರ್ಟಿನ್‌ (ಎಸ್ಪಿ, ಸಿಐಡಿ), ಸುಧೀರ್‌ ಕುಮಾರ್‌ ರೆಡ್ಡಿ (ಉಪ ನಿರ್ದೇಶಕರು, ಕರ್ನಾಟಕ ಪೊಲೀಸ್‌ ಅಕಾಡೆಮಿ, ಮೈಸೂರು), ವರ್ತಿಕಾ ಕಟಿಯಾರ್‌ (ಎಸ್ಪಿ, ಧಾರವಾಡ), ಜಿನೇಂದ್ರ ಖಣಗಾವಿ (ಎಸ್ಪಿ, ಭ್ರಷ್ಟಾಚಾರ ನಿಗ್ರಹ ದಳ, ಬೆಂಗಳೂರು) ಇಲ್ಲಿಗೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.

Advertisement

ಐಎಎಸ್‌ ಅಧಿಕಾರಿಗಳ ವರ್ಗ: ರಾಜ್ಯ ಸರ್ಕಾರ ಇಬ್ಬರು ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಮಾಹಿತಿ ತಂತ್ರಜ್ಞಾನ ಹಾಗೂ ವಿಜ್ಞಾನ ತಂತ್ರಜ್ಞಾನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ.ಇ.ವಿ.ರಮಣರೆಡ್ಡಿ ಅವರನ್ನು ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹುದ್ದೆಗೆ ವರ್ಗಾಯಿಸಲಾಗಿದೆ. ಅಲ್ಲದೆ, ಐಟಿ, ಬಿಟಿ ಮತ್ತು ವಿಜ್ಞಾನ, ತಂತ್ರಜ್ಞಾನ ಇಲಾಖೆಯ ಜವಾಬ್ದಾರಿಯನ್ನೂ ಮುಂದುವರಿಸಲಾಗಿದೆ. ದಾವಣಗೆರೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಬಸವರಾಜೇಂದ್ರ ಅವರನ್ನು ಕೆಐಎಡಿಬಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹಾಗೂ ಕಾರ್ಯಕಾರಿ ಸದಸ್ಯ ಹುದ್ದೆಗೆ ವರ್ಗಾಯಿಸಿ ಆದೇಶ ಹೊರಡಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next