Advertisement

ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೆ ಸಿದ್ಧತೆ

01:45 AM Aug 26, 2020 | mahesh |

ಬೆಂಗಳೂರು: ಶಾಲಾ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಆರಂಭಿಸುವ ಸಂಬಂಧ ಖಾಲಿ ಇರುವ ಮತ್ತು ಹೆಚ್ಚುವರಿ ಶಿಕ್ಷಕರ ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.

Advertisement

ವರ್ಗಾವಣೆಯು ಉಭಯ ಸದನಗಳಲ್ಲಿ ಅನುಮೋದನೆಗೊಂಡು, ರಾಜ್ಯ ಪಾಲರು ಅಂಗೀಕರಿಸಿರುವ ಹೊಸ ವರ್ಗಾವಣೆ ನೀತಿಯಂತೆ ನಡೆಯಲಿದೆ. ಈ ಸಂಬಂಧ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ಡಾ| ಕೆ.ಜೆ. ಜಗದೀಶ್‌ ಅವರು ಮಂಗಳವಾರ ಎಲ್ಲ ಜಿಲ್ಲಾ ಉಪನಿರ್ದೇಶಕರೊಂದಿಗೆ ವೀಡಿಯೋ ಸಂವಾದ ನಡೆಸಿದ್ದು, ಶಿಕ್ಷಕರ ಕೊರತೆ ಇರುವ ಸ್ಥಳಗಳ ಮಾಹಿತಿ ನೀಡುವಂತೆ ಸೂಚಿಸಿದ್ದಾರೆ. ವರ್ಗಾವಣೆ ಪ್ರಕ್ರಿಯೆ ಆರಂಭಿಸಲು ಅನುಮೋದನೆ ನೀಡುವಂತೆ ಸರಕಾರಕ್ಕೆ ಕಡತ ಕಳುಹಿಸಿದ್ದೇವೆ. ಖಾಲಿ ಇರುವ ಸ್ಥಳಗಳ ಮಾಹಿತಿ ಲಭಿಸಿದ ಬಳಿಕ ವೇಳಾಪಟ್ಟಿ ತಯಾರಿಸಲು ಅನುಕೂಲವಾಗಲಿದೆ ಎಂದು ಶಿಕ್ಷಣ ಇಲಾಖೆ ಮೂಲಗಳು ತಿಳಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next