Advertisement

ಹಾಸನ ಡಿಸಿ ರೋಹಿಣಿ ಸೇರಿ ಹಲವು IAS ಅಧಿಕಾರಿಗಳ ವರ್ಗಾವಣೆ 

11:21 AM Mar 03, 2018 | |

ಬೆಂಗಳೂರು: ಚುನಾವಣೆಗೆ ಕೆಲವೇ ದಿನಗಳು ಇರುವ ಹೊತ್ತಿನಲ್ಲಿ ಸರ್ಕಾರ ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೇರಿದಂತೆ ಹಲವು ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

Advertisement

ರೋಹಿಣಿ ಸಿಂಧೂರಿ ಅವರನ್ನು ಉದ್ಯೋಗ ತರಬೇತಿ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ. ಈ ಹಿಂದೆ ಸಿಂಧೂರಿ ವರ್ಗಾವಣೆ ಆದಾಗ ತೀವ್ರ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ವರ್ಗಾವಣೆ ಆದೇಶ ಹಿಂಪಡೆಯಲಾಗಿತ್ತು.

ಮೈಸೂರು ಜಿಲ್ಲಾಧಿಕಾರಿ ರಂದೀಪ್‌ ಅವರನ್ನು ಹಾಸನ ಜಿಲ್ಲಾಧಿಕಾರಿಯನ್ನಾಗಿ ನೇಮಿಸಲಾಗಿದೆ.  ಮೈಸೂರು ಜಿಲ್ಲಾಧಿಕಾರಿಯಾಗಿ ಶಿವಕುಮಾರ್‌ ಅವರನ್ನು ವರ್ಗಾಯಿಸಲಾಗಿದೆ. 

ವರ್ಗಾವಣೆಯಾದ ಇತರ ಅಧಿಕಾರಿಗಳು
ಬೆಂಗಳೂರು ನಗರ ಜಿಲ್ಲಾಧಿಕಾರಿ  ಶಂಕರ್‌ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಬೆಂಗಳೂರು ನಗರಕ್ಕೆ ಜಿಲ್ಲಾಧಿಕಾರಿಯಾಗಿ ದಯಾನಂದ್‌ ಅವರನ್ನು ನೇಮಕ ಮಾಡಲಾಗಿದೆ. 

ವಿಜಯಪುರ ಜಿಲ್ಲಾಧಿಕಾರಿಯಾಗಿ ಶೆಟ್ಟಣ್ಣನವರ್‌, ರಾಮನಗರಕ್ಕೆ ಕ್ಯಾಪ್ಟನ್‌ ರಾಜೇಂದ್ರ , ಚಾಮರಾಜ ನಗರಕ್ಕೆ  ಕಾವೇರಿ  ಮತ್ತು ಯುವಜನ ಸೇವಾ ಆಯುಕ್ತೆಯಾಗಿ ಮಮತಾ ಅವರನ್ನು ವರ್ಗಾವಣೆ ಮಾಡಲಾಗಿದೆ. 

Advertisement
Advertisement

Udayavani is now on Telegram. Click here to join our channel and stay updated with the latest news.

Next