Advertisement

ಕೌನ್ಸೆಲಿಂಗ್‌ ಮೂಲಕವೇ  ವರ್ಗಾವಣೆ: ಕೋಟ

12:14 AM Sep 19, 2021 | Team Udayavani |

ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗ ಗಳ  ಇಲಾಖೆ ಮತ್ತು ಇವುಗಳ ವ್ಯಾಪ್ತಿಗೆ ಬರುವ ನಿಗಮ ಮಂಡಳಿಗಳ‌ ಅಧಿಕಾರಿ – ಸಿಬಂದಿಯನ್ನು ಕೌನ್ಸೆಲಿಂಗ್‌ ಮೂಲಕವೇ ವರ್ಗಾವಣೆ ಮಾಡಲು ತೀರ್ಮಾನಿಸಲಾಗಿದೆ ಎಂದು ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

Advertisement

ಈ ನಿಟ್ಟಿನಲ್ಲಿ ವರ್ಗಾವಣೆ ಮಾರ್ಗಸೂಚಿ ಹಾಗೂ ನಿಯಮ ಗಳನ್ನು ಜಾರಿಗೆ ತರಲು ಅಗತ್ಯವಿದ್ದರೆ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿದ್ದೇವೆ ಎಂದಿದ್ದಾರೆ.

ಇಲಾಖೆಯ ಎಲ್ಲ ಹಂತದ ಅಧಿಕಾರಿ ಸಿಬಂದಿ ವರ್ಗಾವಣೆ ಕೌನ್ಸೆಲಿಂಗ್‌ ಮೂಲಕವೇ ಆಗ ಬೇಕು. ನೌಕರರ ಹಿತದೃಷ್ಟಿಯಿಂದ ಗಂಭೀರ, ಮರಣಾಂತಿಕ ಕಾಯಿಲೆ, ನಿವೃತ್ತಿ ಅಂಚಿ ನಲ್ಲಿರುವವರು, ಅಂಗವಿಕಲರು, ವಿಧವೆ, ಪತಿ-ಪತ್ನಿ ಪ್ರಕರಣಗಳು ಸಹಿತ ಕೆಲವು ವಿಶೇಷ ಪ್ರಕರಣಗಳಿಗೆ ಮಾತ್ರ ವಿನಾಯಿತಿ ನೀಡಲು ನಿರ್ಧರಿಸಲಾಗಿದೆ ಎಂದು ಟಿಪ್ಪಣಿಯಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next