Advertisement
ಜಿಲ್ಲಾ ಪಂಚಾಯತ್ನ ನೇತ್ರಾವತಿ ಸಭಾಂಗಣದಲ್ಲಿ ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ತುರ್ತು ಸಾಮಾನ್ಯ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು.
Related Articles
ಅಡಕೆ ಕೊಳೆರೋಗಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಒಟ್ಟು 56,474 ಮಂದಿ ಕೃಷಿಕರು ಅರ್ಜಿ ಸಲ್ಲಿಸಿದ್ದಾರೆ. ಈ ಪೈಕಿ 28,154 ಮಂದಿ ಕೃಷಿಕರ ಬ್ಯಾಂಕ್ ಖಾತೆಗೆ 29.14 ಕೋಟಿ ರೂ. ಪರಿಹಾರ ಜಮಾ ಮಾಡಲಾಗಿದೆ ಎಂದು ತೋಟಗಾರಿಕಾ ಇಲಾಖೆ ಅಧಿಕಾರಿ ವಿವರಿಸಿದರು.
Advertisement
ದ. ಕ. ಜಿಲ್ಲೆಯಲ್ಲಿ ರಸ್ತೆ ಸುರಕ್ಷತೆಗೆ 22 ಲಕ್ಷ ರೂ. ಬಿಡುಗಡೆಯಾಗಿದೆ. ನೀರು ಸರಬರಾಜಿಗೆ ಸಂಬಂಧಿಸಿದಂತೆ 849 ಕಾಮಗಾರಿಗಳು ಪೂರ್ಣಗೊಂಡಿದ್ದು, 1,185 ಕಾಮಗಾರಿ ಪ್ರಾರಂಭವಾಗಿವೆ ಎಂದು ಅಧಿಕಾರಿಗಳು ತಿಳಿಸಿದರು.
ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಕಸ್ತೂರಿ ಪಂಜ, ಸ್ಥಾಯೀ ಸಮಿತಿ ಅಧ್ಯಕ್ಷರಾದ ಜನಾರ್ದನ ಗೌಡ, ಅನಿತಾ ಹೇಮನಾಥ ಶೆಟ್ಟಿ, ಯು.ಟಿ. ಇಬ್ರಾಹಿಂ ಉಪಸ್ಥಿತರಿದ್ದರು.
ರಸ್ತೆ ಅಭಿವೃದ್ದಿಗೆ 56.4 ಕೋಟಿ ರೂ.ಶಾಸಕರ ವಿಶೇಷ ಅನುದಾನದಡಿಯಲ್ಲಿ ರಸ್ತೆ ಅಭಿವೃದ್ಧಿಗೆ ಕಳೆದ ವರ್ಷ 60.10 ಕೋಟಿ ರೂ.ಗಳ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಈ ಪೈಕಿ 56.4 ಕೋಟಿ ರೂ. ಬಿಡುಗಡೆಯಾಗಿದೆ. 870 ಕಾಮಗಾರಿಗಳು ಈಗಾಗಲೇ ಪೂರ್ಣಗೊಂಡಿದ್ದು, 139 ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ಅಧಿಕಾರಿಗಳು ವಿವರಿಸಿದರು. 2018-19ನೇ ಸಾಲಿನ ದೀನ್ ದಯಾಳ್ ಉಪಾಧ್ಯಾಯ ಪಂಚಾಯತ್ ಸಶಕ್ತೀಕರಣ ಪುರಸ್ಕಾರದಡಿ ರಾಜ್ಯದ ಪಂಚಾಯತ್ ರಾಜ್ ಸಂಸ್ಥೆಗಳಿಗೆ ಘೋಷಣೆಯಾಗಿರುವ ಪ್ರೋತ್ಸಾಹ ಅನುದಾನದಲ್ಲಿ ದ.ಕ. ಜಿಲ್ಲೆಗೆ 50 ಲಕ್ಷ ರೂ. ಬಿಡುಗಡೆಯಾಗಿದೆ. ಈ ಅನುದಾನವನ್ನು ಕ್ಷೇತ್ರವಾರು ನೆಲೆಯಲ್ಲಿ ಹಂಚಿಕೆ ಮಾಡಲಾಗುವುದು ಎಂದು ಅಧ್ಯಕ್ಷೆ ಮೀನಾಕ್ಷಿ ತಿಳಿಸಿದರು.