Advertisement

ಪಿಂಚಣಿ ಸೌಲಭ್ಯಕ್ಕೆ ಸಾರಿಗೆ ನೌಕರರ ಆಗ್ರಹ

03:27 PM Feb 11, 2020 | Team Udayavani |

ಬೆಳಗಾವಿ: ಕೆಎಸ್‌ಆರ್‌ಟಿಸಿ ಹಾಗೂ ಇತರ ಸಾರಿಗೆ ಸಂಸ್ಥೆಗಳ ಅಧಿಕಾರಿಗಳು ಹಾಗೂ ನೌಕರ ವರ್ಗಕ್ಕೆ ಪಿಂಚಣಿ ಮತ್ತು ಆರೋಗ್ಯ ವಿಮೆ ಸೌಲಭ್ಯ ನೀಡಬೇಕು ಎಂದು ಒತ್ತಾಯಿಸಿ ಸಾರಿಗೆ ಸಂಸ್ಥೆ ನೌಕರರ ಹಾಗೂ ನಿವೃತ್ತ ನೌಕರರ ಕ್ಷೇಮಾಭಿವೃದ್ಧಿ ಮಹಾಮಂಡಳದ ಸದಸ್ಯರು ಸೋಮವಾರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

Advertisement

ನಿವೃತ್ತಿ ನಂತರ ಸಾರಿಗೆ ನಿಗಮದ ಅಧಿಕಾರಿಗಳು ಹಾಗೂ ನೌಕರರಿಗೆ ಸರಕಾರದಿಂದ ಪಿಂಚಣಿ ಸೌಲಭ್ಯ ಸಿಗುತ್ತಿಲ್ಲ. ಅದೇ ದೇಶದ ಇತರೆ ರಾಜ್ಯಗಳ ಸಾರಿಗೆ ಸಂಸ್ಥೆಗಳಲ್ಲಿ ಪಿಂಚಣಿ ಹಾಗೂ ಆರೋಗ್ಯ ವಿಮೆ ಸೌಲಭ್ಯ ನೀಡಲಾಗುತ್ತಿದೆ. ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದರೆ ಸಾರಿಗೆ ಸಂಸ್ಥೆ ನೌಕರರಿಗೆ ಮಾಸಿಕ10 ಸಾವಿರ ರೂ. ಪಿಂಚಣಿ ಹಾಗೂ ಆರೋಗ್ಯ ವಿಮೆ ಸೌಲಭ್ಯ ನೀಡಲಾಗುವದು ಎಂದು ಭರವಸೆ ನೀಡಲಾಗಿತ್ತು. ಈಗ ಅದನ್ನು ಜಾರಿಗೆ ತರಬೇಕು ಎಂದು ಸಾರಿಗೆ ಸಂಸ್ಥೆ ನೌಕರರ ಹಾಗೂ ನಿವೃತ್ತ ನೌಕರರ ಕ್ಷೇಮಾಭಿವೃದ್ಧಿ ಮಹಾಮಂಡಳದ ಜಿಲ್ಲಾಧ್ಯಕ್ಷ ಆರ್‌.ಪಿ.ಕೋಪರ್ಡೆ ಆಗ್ರಹಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next