Advertisement

Trasi ; ಎಲೆಕ್ಟ್ರಾನಿಕ್ಸ್‌ ಶೋರೂಂಗೆ ಬೆಂಕಿ; ಕೋಟ್ಯಂತರ ರೂ. ನಷ್ಟ

11:09 PM Jun 10, 2024 | Team Udayavani |

ಕುಂದಾಪುರ: ಇಲ್ಲಿನ ರಾಸ್ಟ್ರೀಯ ಹೆದ್ದಾರಿ 66ರ ತ್ರಾಸಿಯ ಅಂಬಾ ಟಿವಿ ಹಾಗೂ ಹೋಂ ಅಪ್ಲಾಯನ್ಸಸ್‌ ಶೋರೂಂನಲ್ಲಿ ಆಕಸ್ಮಿಕ ಬೆಂಕಿ ಅವಘಡವಾಗಿದ್ದು, ಕೋಟ್ಯಾಂತರ ರೂ. ನಷ್ಟ ಸಂಭವಿಸಿದ ಘಟನೆ ರವಿವಾರ ರಾತ್ರಿ 10 ಗಂಟೆ ಸುಮಾರಿಗೆ ಸಂಭವಿಸಿದೆ.

Advertisement

ಸುಧಾಕರ ಶೆಟ್ಟಿ ಅವರಿಗೆ ಸೇರಿದ ಮಳಿಗೆ ಇದಾಗಿದ್ದು, ಅಲ್ಲಿ ಇಟ್ಟಿದ್ದ 3 ಲಕ್ಷ ರೂ. ನಗದು ಸಹಿತ ಎಲ್ಲ ಹಾನಿಯಾದ ಸೊತ್ತುಗಳೆಲ್ಲ ಸೇರಿದಂತೆ ಅಂದಾಜು 1.50 ಕೋ.ರೂ.ಗೂ ಮಿಕ್ಕಿ ನಷ್ಟ ಉಂಟಾಗಿದೆ. ರವಿವಾರ ರಾತ್ರಿ 8.30ಕ್ಕೆ ಮಳಿಗೆ ಬಂದ್‌ ಮಾಡಿ, ಮನೆಗೆ ಹೋಗಿದ್ದು, ಆ ಬಳಿಕ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ರಾತ್ರಿ 10 ಗಂಟೆಯ ಸುಮಾರಿಗೆ ಘಟನೆ ಬೆಳಕಿಗೆ ಬಂದಿದೆ.

ಶಾರ್ಟ್ ಸರ್ಕ್ಯೂಟ್ ನಿಂದ ಮಳಿಗೆಯ ಕೆಳಗಿನ ಫ್ಲೋರ್‌ನಲ್ಲಿದ್ದ ಬಹುತೇಕ ಎಲೆಕ್ಟ್ರಾನಿಕ್‌ ಸೊತ್ತುಗಳು, ಚಯರ್‌, ಇನ್ನಿತರ ವಸ್ತುಗಳು ಸುಟ್ಟು ಕರಕಲಾಗಿವೆ. ಮೇಲಿನ ಫ್ಲೋರ್‌ಗೆ ಅಷ್ಟೊಂದು ಪ್ರಮಾಣದ ಹಾನಿಯಾಗದಂತೆ ತಡೆಯುವಲ್ಲಿ ಅಗ್ನಿಶಾಮಕ ದಳದ ತಂಡ ಯಶಸ್ವಿಯಾಗಿದೆ. ಮಳಿಗೆಯಲ್ಲಿ ಒಟ್ಟಾರೆ 2.50 ಕೋ.ರೂ. ಮೌಲ್ಯದ ಸೊತ್ತುಗಳು ದಾಸ್ತಾನಿದ್ದು, ಈ ಪೈಕಿ 1.50 ಕೋ.ರೂ.ಗೂ ಮಿಕ್ಕಿ ಮೌಲ್ಯದ ಸೊತ್ತುಗಳು ಬೆಂಕಿಗೆ ಆಹುತಿಯಾಗಿವೆ ಎಂದು ಅಂದಾಜಿಸಲಾಗಿದೆ.

ಮಂಗಳೂರಿನ ಪ್ರಾದೇಶಿಕ ಅಗ್ನಿಶಾಮಕ ಅಧಿಕಾರಿ ಆರ್‌. ರಂಗನಾಥ್‌, ಉಡುಪಿ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ವಿನಾಯಕ ಕಲ್ಗುಟಿಕರ್‌ ಘಟನ ಸ್ಥಳಕ್ಕೆ ಭೇಟಿ ನೀಡಿ, ಮಾಹಿತಿ ಪಡೆದುಕೊಂಡಿದ್ದಾರೆ.

5 ಗಂಟೆ ನಿರಂತರ ಕಾರ್ಯಾಚರಣೆ
ರಾತ್ರಿ ಸಂಭವಿಸಿದ ಈ ದೊಡ್ಡ ಮಟ್ಟದ ಬೆಂಕಿ ಅವಘಡದ ಸುದ್ದಿ ತಿಳಿಯುತ್ತಿದ್ದಂತೆ ಬೈಂದೂರು, ಕುಂದಾಪುರ ಹಾಗೂ ಉಡುಪಿಯ 3 ಅಗ್ನಿಶಾಮಕ ದಳದ ವಾಹನಗಳು ಹಾಗೂ ಸಿಬಂದಿ ಆಗಮಿಸಿ, ಬೆಂಕಿ ನಂದಿಸುವ ಕಾರ್ಯ ಕೈಗೊಂಡರು. ಕುಂದಾಪುರದ ಅಗ್ನಿಶಾಮಕ ಠಾಣಾಧಿಕಾರಿ ವಿ. ಸುಂದರ್‌, ಬೈಂದೂರಿನ ಅಗ್ನಿಶಾಮಕ ಸಹಾಯಕ ಠಾಣಾಧಿಕಾರಿ ಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ ಸಿಬಂದಿಯ ತಂಡದಿಂದ ಬೆಂಕಿ ನಂದಿಸುವ ಕಾರ್ಯ ನಡೆಯಿತು. ರಾತ್ರಿ 10.30ರಿಂದ ಆರಂಭಗೊಂಡ ಕಾರ್ಯಾಚರಣೆ ಸೋಮವಾರ ಬೆಳಗ್ಗಿನ ಜಾವ 3 ಗಂಟೆಯವರೆಗೂ ನಡೆಯಿತು.

Advertisement
Advertisement

Udayavani is now on Telegram. Click here to join our channel and stay updated with the latest news.

Next