Advertisement

ಕುಂದಾಪುರ : ಬೃಹತ್ ಗಾತ್ರದ ಮಾರ್ಬಲ್‌ ಮೈಮೇಲೆ ಬಿದ್ದು ಓರ್ವ ಸಾವು, ಇನ್ನಿಬ್ಬರಿಗೆ ಗಾಯ

08:32 PM Mar 03, 2022 | Team Udayavani |

ಕುಂದಾಪುರ : ತ್ರಾಸಿ ಸಮೀಪದ ಕಂಚುಗೋಡು ಬೀಚ್‌ ಬಳಿ ಮಾರ್ಬಲ್‌ ಲಾರಿಯಿಂದ ಇಳಿಸುವ ವೇಳೆ ನಡೆದ ಅವಘಢದಲ್ಲಿ ಓರ್ವ ಸಾವನ್ನಪ್ಪಿದ್ದು, ಇನ್ನಿಬ್ಬರು ಗಾಯಗೊಂಡ ಘಟನೆ ಗುರುವಾರ ಸಂಜೆ 6 ಗಂಟೆ ಸುಮಾರಿಗೆ ಸಂಭವಿಸಿದೆ.

Advertisement

ಪಶ್ಚಿಮ ಬಂಗಾಲ ಮೂಲದ ಗಣಪತಿ ಸಾವನ್ನಪ್ಪಿದವರು ಎಂದು ತಿಳಿದು ಬಂದಿದೆ.

ಇನ್ನಿಬ್ಬರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ಪೈಕಿ ಓರ್ವನ ಸ್ಥಿತಿ ಗಂಭೀರವಾಗಿದ್ದು, ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ಹೇಗಾಯಿತು?
ಕಂಚುಗೋಡು ಬೀಚ್‌ ಸಮೀಪ ನಿರ್ಮಾಣವಾಗುತ್ತಿದ್ದ ಖಾಸಗಿ ರೆಸಾರ್ಟ್‌ವೊಂದರ ಕಾಮಗಾರಿ ಸಲುವಾಗಿ ಪಶ್ಚಿಮ ಬಂಗಾಲದಿಂದ ಲಾರಿಯಲ್ಲಿ ಮಾರ್ಬಲ್‌ಗ‌ಳನ್ನು ಬುಧವಾರ ತರಿಸಲಾಗಿದೆ. ಬೃಹತ್‌ ಸರಕು ಆಗಿರುವುದರಿಂದ ಬುಧವಾರದಿಂದಲೇ 5-6 ಮಂದಿಯ ತಂಡವು ಲಾರಿಯಿಂದ ಮಾರ್ಬಲ್‌ಗ‌ಳನ್ನು ಇಳಿಸುತ್ತಿದ್ದರು. ಗುರುವಾರ ಸಂಜೆ ವೇಳೆಗೆ ಅರ್ಧದಷ್ಟು ಇಳಿಸಿ ಆಗಿತ್ತು. ಸಂಜೆ 6 ಗಂಟೆ ಸುಮಾರಿಗೆ ಇಳಿಸುತ್ತಿರುವ ವೇಳೆ ಮೂವರ ಮೇಲೆ ಬೃಹತ್‌ ಮಾರ್ಬಲ್‌ ಮೇಲೆ ಬಿದ್ದಿದೆ.

ಇದನ್ನೂ ಓದಿ : ಬಜೆಟ್ ಗಾತ್ರ 2.50 ಲಕ್ಷ ಕೋಟಿಗೆ ಏರಿಕೆಯಾಗಲಿದೆ : ಶಾಸಕ ನಡಹಳ್ಳಿ

Advertisement

ಮಾರ್ಬಲ್‌ ಅಡಿಗೆ ಬಿದ್ದವರನ್ನು ಕೂಡಲೇ ಸ್ಥಳೀಯರೆಲ್ಲ ರಕ್ಷಿಸಲು ಪ್ರಯತ್ನಿಸಿದ್ದಾರೆ. ತತ್‌ಕ್ಷಣ ಸ್ಥಳಕ್ಕಾಗಮಿಸಿದ 24×7 ಇಬ್ರಾಹಿಂ ಗಂಗೊಳ್ಳಿ ಅವರು ಆಂಬುಲೆನ್ಸ್‌ ಮೂಲಕ ಮೂವರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದರು. ಆಸ್ಪತ್ರೆಯಲ್ಲಿ ಓರ್ವ ಸಾವನ್ನಪ್ಪಿದ್ದು, ಇನ್ನಿಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಗಂಗೊಳ್ಳಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಕಲೆಹಾಕಿದ್ದಾರೆ

Advertisement

Udayavani is now on Telegram. Click here to join our channel and stay updated with the latest news.

Next