Advertisement

ಶ್ರಮಿಕ ವಿಶೇಷ ರೈಲುಗಳಲ್ಲಿ 3.02 ಲಕ್ಷ ಜನರ ಪ್ರಯಾಣ

05:08 AM Jun 06, 2020 | Suhan S |

ಹುಬ್ಬಳ್ಳಿ: ನೈಋತ್ಯ ರೈಲ್ವೆ ಜೂ. 5ರ ವರೆಗೆ 209 ಶ್ರಮಿಕ ವಿಶೇಷ ರೈಲುಗಳ ಸೇವೆ ಕಲ್ಪಿಸಿದ್ದು, ಒಟ್ಟು 3.02 ಲಕ್ಷ ಪ್ರಯಾಣಿಕರು ಪ್ರಯಾಣ ಬೆಳೆಸಿದ್ದಾರೆ.

Advertisement

ರಾಜ್ಯ ಸರಕಾರದ ಬೇಡಿಕೆಗೆ ಅನುಗುಣವಾಗಿ ವಲಸೆ ಕಾರ್ಮಿಕರು ತವರಿಗೆ ತೆರಳುವ ದಿಸೆಯಲ್ಲಿ ವಿಶೇಷ ರೈಲುಗಳನ್ನು ಓಡಿಸಲಾಗುತ್ತಿದೆ. ನೈಋತ್ಯ ರೈಲ್ವೆ ಬೆಂಗಳೂರು ನಗರ, ಬೆಂಗಳೂರು ಕಂಟೋನ್ಮೆಂಟ್‌, ಚಿಕ್ಕಬಾಣಾವರ, ಮಾಲೂರು, ಮೈಸೂರು, ಅಶೋಕಪುರಂ, ಕುಬಕಪುತ್ತೂರ, ಹಾಸನ, ಹುಬ್ಬಳ್ಳಿ, ಹೊಸಪೇಟೆ, ಬಳ್ಳಾರಿ, ಕೊಪ್ಪಳ ಹಾಗೂ ತಮಿಳುನಾಡಿನ ಹೊಸೂರಿನಿಂದ ರೈಲುಗಳ ಸೇವೆ ಒದಗಿಸಲಾಗಿದೆ. ಬಿಹಾರ, ಉತ್ತರಪ್ರದೇಶ, ಜಾರ್ಖಂಡ, ಪಶ್ಚಿಮ ಬಂಗಾಳ, ಓಡಿಶಾ, ರಾಜಸ್ಥಾನ, ಅಸ್ಸಾಂ, ಮಧ್ಯಪ್ರದೇಶ, ತ್ರಿಪುರ, ಉತ್ತರಾಖಂಡ, ಜಮ್ಮು-ಕಾಶ್ಮೀರ, ಮಣಿಪುರ, ಹಿಮಾಚಲಪ್ರದೇಶ, ಛತೀ¤ಸಗಢ, ಕೇರಳ, ಮಿಜೋರಾಂ, ನಾಗಾಲ್ಯಾಂಡ್‌ ರಾಜ್ಯಗಳಿಗೆ ರೈಲು ಸೇವೆ ಕಲ್ಪಿಸಲಾಗಿದೆ ಎಂದು ನೈಋತ್ಯ ರೈಲ್ವೆ ಪ್ರಕಟಣೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next