Advertisement

“ಮೈತ್ರಿ ಸರ್ಕಾರದಲ್ಲಿ ಬೊಕ್ಕಸ ಖಾಲಿಯಾಗಿದೆ’

11:09 PM Oct 09, 2019 | Team Udayavani |

ಗದಗ: ರಾಜ್ಯದ ಬೊಕ್ಕಸ ಖಾಲಿಯಾಗಿದೆ ಎಂಬ ಸಿಎಂ ಬಿ.ಎಸ್‌.ಯಡಿಯೂರಪ್ಪ ಹೇಳಿಕೆ ನೂರಕ್ಕೆ ನೂರರಷ್ಟು ಸತ್ಯ. ಇದು ಹಿಂದಿನ ಮೈತ್ರಿ ಸರ್ಕಾರದ ಫ‌ಲ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು. ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಹಿಂದಿನ ಕಾಂಗ್ರೆಸ್‌-ಜೆಡಿಎಸ್‌ ಸಮ್ಮಿಶ್ರ ಸರ್ಕಾರ ರಾಜ್ಯದ ಬೊಕ್ಕಸವನ್ನು ಸಂಪೂರ್ಣ ಖಾಲಿ ಮಾಡಿದೆ.

Advertisement

ತಮಗೆ ಬೇಕಾಗಿದ್ದಕ್ಕೆ ಅನುದಾನ ಮಂಜೂರು ಮಾಡಿದ್ದಾರೆ. ಹೀಗಾಗಿ, ಯಡಿಯೂರಪ್ಪ ಸರ್ಕಾರಕ್ಕೆ ಅನುದಾನದ ಕೊರತೆ ಎದುರಾಗಿದೆ. ಸಿಎಂ ಜೊತೆ ಶಾಸಕರು ಜಗಳ ಮಾಡು ವಂತಾ ಗಿದೆ. ಆದರೂ, ಮುಖ್ಯಮಂತ್ರಿಯವರು ಅನುದಾನ ಮಂಜೂರು ಮಾಡುತ್ತಿದ್ದಾರೆ. ಆದರೆ, ಬಿಳಿ ಹಾಳೆ ಮೇಲೆ ಅನು ದಾನ ಮಂಜೂರು ಮಾಡಿದರೆ ಪ್ರಯೋಜನವೇನು? ಎಂದರು.

Advertisement

Udayavani is now on Telegram. Click here to join our channel and stay updated with the latest news.

Next