Advertisement

ರೋಗಿಗಳಿಗೆ ಚಿಕಿತ್ಸೆ: ಆರೋಗ್ಯ ಕೇಂದ್ರಗಳಿಗೆ ಸೂಚನೆ     

09:00 PM Apr 08, 2020 | Sriram |

ಬೆಂಗಳೂರು: ರೋಗಿಗಳನ್ನು ತಪಾಸಣೆ ಮಾಡದೆ ನೇರವಾಗಿ ತಾಲೂಕು, ಜಿಲ್ಲಾಸ್ಪತ್ರೆಗಳಿಗೆ ಕಳುಹಿಸುತ್ತಿರುವ ಸರಕಾರಿ ಪ್ರಾಥಮಿಕ ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸುತ್ತೋಲೆ ಹೊರಡಿಸಿದೆ.

Advertisement

ರಾಜ್ಯಾದ್ಯಂತ ಕೋವಿಡ್ 19 ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಶೀತ, ಜ್ವರ, ಕೆಮ್ಮು ಮತ್ತು ಇತರ ಸಮಸ್ಯೆಯಿಂದ ಪ್ರಾಥಮಿಕ ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಿಗೆ ಬರುವ ರೋಗಿಗಳಿಗೆ ಚಿಕಿತ್ಸೆ ನೀಡದೆ ಮೇಲ್ದರ್ಜೆಯ ತಾಲೂಕು ಮತ್ತು ಜಿಲ್ಲಾ ಮಟ್ಟದ ಆಸ್ಪತ್ರೆಗಳಿಗೆ ನಿರ್ದೇಶ ನೀಡುತ್ತಿರುವುದು ಗಮನಕ್ಕೆ ಬಂದಿದೆ. ಇದರಿಂದ ತಾಲೂಕು ಮತ್ತು ಜಿಲ್ಲಾ ಮಟ್ಟದ ಆಸ್ಪತ್ರೆಗಳಲ್ಲಿ ಅನಗತ್ಯವಾಗಿ ಜನದಟ್ಟಣೆಯಾಗುತ್ತಿದೆ. ಇದರಿಂದಾಗಿ ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಲು ಸಾಧ್ಯವಾಗುತ್ತಿಲ್ಲ. ಎಲ್ಲ ರೋಗಿಗಳನ್ನು ತಪಾಸಣೆ ನಡೆಸಿ ಸೂಕ್ತ ಚಿಕಿತ್ಸೆ ನೀಡಬೇಕು. ಇನ್ನು ಕೋವಿಡ್ 19 ಸೋಂಕು ಲಕ್ಷಣಗಳು ಕಂಡು ಬಂದರೆ ತತ್‌ಕ್ಷಣ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳಿಗೆ ಮಾಹಿತಿ ನೀಡಿ ಎಚ್ಚರಿಕೆ ಕ್ರಮಗಳೊಂದಿಗೆ ರೋಗಿಯನ್ನು ರವಾನಿಸಬೇಕು ಎಂದು ಸೂಚಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next