Advertisement

ಗುಂಡ್ಯ -ಸುಬ್ರಮಣ್ಯ ರಾಜ್ಯ ಹೆದ್ದಾರಿಗೆ ಅಡ್ಡಲಾಗಿ ಬಿದ್ದ ಮರ: ಟ್ರಾಫಿಕ್ ಜಾಮ್

08:59 AM Feb 08, 2021 | Team Udayavani |

ಕಡಬ: ಗುಂಡ್ಯ -ಸುಬ್ರಮಣ್ಯ ರಾಜ್ಯ ಹೆದ್ದಾರಿಗೆ ಅಡ್ಡಲಾಗಿ ಗುಂಡ್ಯ ಅರಣ್ಯ ಕಚೇರಿ ಬಳಿ ಬೃಹತ್ ಮರ ಮುರಿದು ಬಿದ್ದ ಕಾರಣ ಟ್ರಾಫಿಕ್ ಜಾಮ್ ಸಮಸ್ಯೆ ಎದುರಾಗಿದೆ.

Advertisement

ರವಿವಾರ ತಡರಾತ್ರಿ ಘಟನೆ ನಡೆದಿದ್ದು, ಮರ ತೆರವು ಕಾರ್ಯಾಚರಣೆ ಆರಂಭಗೊಂಡಿದೆ ಎಂದು ಸುಬ್ರಮಣ್ಯ ವಲಯ ಅರಣ್ಯಧಿಕಾರಿ ರಾಘವೇಂದ್ರ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಚಿನ್ನಮ್ಮನ ಬೆಂಗಳೂರು ವಾಸ ಅಂತ್ಯ: ತಮಿಳುನಾಡಿನತ್ತ ಹೊರಟ ವಿ.ಕೆ. ಶಶಿಕಲಾ

ವಿದ್ಯುತ್ ಲೈನ್ ಗೂ ಹಾನಿಯಾಗಿದೆ. ಮೆಸ್ಕಾಂ ಸಿಬಂದಿಗಳು ಸ್ಥಳದಲ್ಲಿದ್ದಾರೆ.

Advertisement

ಬೆಂಗಳೂರಿನಿಂದ ಸುಬ್ರಮಣ್ಯ ಸಂಪರ್ಕದ ಪ್ರಮುಖ ದಾರಿ ಇದಾಗಿದೆ. ಸೋಮವಾರವಾದ್ದರಿಂದ ಕ್ಷೇತ್ರಕ್ಕೆ ಆಗಮಿಸುವ ಯಾತ್ರಿಕರ ಸಂಖ್ಯೆ ಹೆಚ್ಚಾಗಿದೆ. ರಸ್ತೆಗೆ ಮರ ಅಡ್ಡವಾಗಿ ಬಿದ್ದ ಕಾರಣ ವಾಹನಗಳು ಸಾಲುಗಟ್ಟಿ ನಿಂತಿವೆ.

Advertisement

Udayavani is now on Telegram. Click here to join our channel and stay updated with the latest news.

Next