Advertisement

ಆಗುಂಬೆ ಘಾಟಿಯಲ್ಲಿ ಉರುಳಿದ ಮರ: ಕೆಲಕಾಲ ವಾಹನ ಸಂಚಾರ ಬಂದ್

03:44 PM Jun 01, 2022 | Vishnudas Patil |

ಶಿವಮೊಗ್ಗ: ಮರ ಧರೆಗುರುಳಿ ಆಗುಂಬೆ ಘಾಟಿಯಲ್ಲಿ ಕೆಲಕಾಲ ವಾಹನ ಸಂಚಾರ ಬಂದ್ ಆಗಿತ್ತು. ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ, ಮರ ತೆರವು ಮಾಡಿದ್ದಾರೆ.

Advertisement

ಆಗುಂಬೆ ಘಾಟಿಯ ಮೂರನೆ ತಿರುವಿನಲ್ಲಿ ಬುಧವಾರ ಬೆಳಗ್ಗೆ ಮರವೊಂದು ಧರೆಗುರುಳಿತ್ತು. ಅದೃಷ್ಟವಶಾತ್ ಯಾವುದೆ ಅಪಾಯ ಸಂಭವಿಸಿಲ್ಲ.

ರಸ್ತೆಗೆ ಅಡ್ಡಲಾಗಿ ಮರ ಬಿದ್ದಿದ್ದರಿಂದ ವಾಹನ ಸಂಚಾರ ವ್ಯತ್ಯಯ ಉಂಟಾಗಿತ್ತು. ಘಾಟಿಯಲ್ಲಿ ಕೆಲವು ಹೊತ್ತು ಟ್ರಾಫಿಕ್ ಜಾಮ್ ಉಂಟಾಗಿತ್ತು. ಅಡ್ಡಲಾಗಿ ಬಿದ್ದಿದ್ದ ಮರದ ಕೆಳಗೆ ಸ್ವಲ್ಪ ಜಾಗವಿದ್ದಿದ್ದರಿಂದ ಕಾರುಗಳು, ಬೈಕುಗಳು ಸಂಚರಿಸಿದವು.

ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ, ಮರವನ್ನು ಕತ್ತರಿಸಿದರು. ಆ ಬಳಿಕ ವಾಹನ ಸಂಚಾರ ಪುನಾರಂಭವಾಯಿತು.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next